ಪಡುಬಿದ್ರಿ, ಏ.10 (DaijiworldNews/HR): ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಪೇಟೆಯಲ್ಲಿ ಬೈಕ್ ಮತ್ತು ಟೆಂಪೋ ವಾಹನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಮೃತಪಟ್ಟವರನ್ನು ಹೆಜಮಾಡಿಯ ಎನ್.ಎಸ್ ರೋಡ್ ನ ನಿವಾಸಿ ಶಿಯಾಲಿ ಹಾಜಿ ಕನ್ನಂಗಾರ್ ಇವರ ಮಗ ಮುಹಮ್ಮದ್ ಅಲಿ ಎಂದು ಗುರುತಿಸಲಾಗಿದೆ.
ಬೈಕ್ ನಲ್ಲಿ ಸಂಚರಿಸುತಿದ್ದಾಗ ಟೆಂಪೋ ವಾಹನ ಡಿಕ್ಕಿ ಹೊಡೆದಿದ್ದು, ಕೂಡಲೇ ಮುಹಮ್ಮದ್ ಅಲಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಮುಹಮ್ಮದ್ ಅಲಿ ಪಿಡ್ಲ್ಯೂಡಿ ಕಾಂಟ್ರ್ಯಾಕ್ಟರ್ ಆಗಿದ್ದರು. ಇವರು ಪತ್ನಿ ಮತ್ತು ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.