ವಿಟ್ಲ, ಎ.11 (DaijiworldNews/PY): ಪಿಕಪ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ಎಪ್ರಿಲ್ 11ರ ರವಿವಾರ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಅಕ್ಷಯ ಸಭಾಭವನದ ಮುಂದೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿನ ಚಾಲಕ ಕಂಠಪೂರ್ತಿ ಕುಡಿದು ಕಾರು ಚಲಾಯಿಸಿಕೊಂಡು ಬರುತ್ತಿದ್ದ ಸಂದರ್ಭ ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಪಿಕಪ್ಗೆ ಢಿಕ್ಕಿಯಾಗಿದೆ. ಢಿಕ್ಕಿಯಾದ ಪರಿಣಾಮ ಕಾರು ಭಾಗರ್ಶ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಪರಾಗಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು. ಪರಿಶೀಲನೆ ನಡೆಸಿದ್ದಾರೆ.