ಉಡುಪಿ, ಏ.11 (DaijiworldNews/HR): ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ಬುಕ್ ಅಕೌಂಟ್ ರಚಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದೆ.
ಈ ಕುರಿತು ಜಿಲ್ಲಾಧಿಕಾರಿಗಳು ತಮ್ಮ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನನ್ನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಅಕೌಂಟ್ ಮಾಡಿದ್ದು, ಅದರಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಈ ಬಗ್ಗೆ ನಾನು ಪೊಲೀಸರಿಗೆ ದೂರು ನೀಡಿದ್ದೇನೆ ದಯವಿಟ್ಟು ಯಾರೂ ಹಣ ಕೊಡಬೇಡಿ ಎಂದು ವಿನಂತಿ ಮಾಡಿಕೊಂಡಿದ್ದಾರೆ.
ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ಬುಕ್ ಅಕೌಂಟ್ ರಚಿಸಿ, ಫೋನ್ ಪೇ ಮೂಲಕ ಏಳು ಸಾವಿರ ಹಣವನ್ನು ಸಂಬಂಧಿಕರ ಅಕೌಂಟಿಗೆ ವರ್ಗಾಯಿಸುವಂತೆ ಬೇಡಿಕೆ ಇಟ್ಟಿದ್ದಾರೆ.
ಈ ಬಗ್ಗೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದು, ಯಾರೂ ಹಣ ಕೊಡದಂತೆ ವಿನಂತಿಸಿಕೊಂಡಿದ್ದಾರೆ.