ಮಂಗಳೂರು, ಏ.12 (DaijiworldNews/MB) : ತೊಕ್ಕೊಟ್ಟು ಬಳಿ ರೈಲ್ವೇ ಹಳಿಯನ್ನು ದಾಟುತ್ತಿದ್ದಾಗ 47 ವರ್ಷದ ವ್ಯಕ್ತಿಯೊಬ್ಬರಿಗೆ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಏಪ್ರಿಲ್ 11 ರ ಭಾನುವಾರದಂದು ನಡೆದಿದೆ.
ಮೃತರನ್ನು ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ. ಮೃತರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.
ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದಾರೆ.