ಮಂಗಳೂರು, ಏ 12 (DaijiworldNews/MS): ಬೈಕಂಪಾಡಿಯಲ್ಲಿ ವಲಸೆ ಕಾರ್ಮಿಕರೋರ್ವರ ಮೃತದೇಹ ಏ.12ರ ಸೋಮವಾರ ಮುಂಜಾನೆ ಪತ್ತೆಯಾಗಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಯಲ್ಲಪ್ಪ (47) ಎಂದು ಗುರುತಿಸಲಾಗಿದೆ.
ಬೈಕಂಪಾಡಿಯಲ್ಲಿ ರೈಲ್ವೆ ಹಳಿಯ ಬಳಿ ಯಲ್ಲಪ್ಪ ಅವರ ಮೃತದೇಹ ಕಂಡುಬಂದಿದ್ದು, ಅವರ ಕುತ್ತಿಗೆಯಲ್ಲಿ ಗಾಯ ಕಂಡು ಬಂದ ಹಿನ್ನಲೆಯಲ್ಲಿ ಪೊಲೀಸರು ಕೊಲೆ ನಡೆದಿರಬಹುದು ಎಂದು ಅಂದಾಜಿಸಿದ್ದಾರೆ.
ಪಣಂಬೂರು ಪೊಲೀಸರು, ಬೆರಳಚ್ಚು ತಜ್ಞರು ಮತ್ತು ಶ್ವಾನದಳದೊಂದಿಗೆ ಸ್ಥಳಕ್ಕೆ ಹಾಜರಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.