ಉಡುಪಿ, ಎ.14 (DaijiworldNews/PY): "ಸಮಾಜದಲ್ಲಿ ಜಾತಿಯ ಹೆಸರಿನಲ್ಲಿ ತುಳಿತಕ್ಕೊಳಗಾದ ಜನರಿಗೆ ನ್ಯಾಯ ದೊರಕಿಸಿ ಕೊಡಲು ನಿರಂತರ ಹೋರಾಟದ ಮೂಲಕ ತನ್ನ ಜೀವನವನ್ನೇ ಮುಡಿಪಾಗಿಟ್ಟವರು ಅಂಬೇಡ್ಕರ್. ಅವರು ದೇಶಕ್ಕೆ ಕೊಟ್ಟ ಸಂವಿಧಾನವನ್ನು ಬದಲಾವಣೆ ಮಾಡುವ ಮಾತು ಕೇಳಿ ಬರುತ್ತಿರುವುದು ಆಘಾತಕಾರಿ. ಇಂತಹ ಮಾತು ಪ್ರಜಾಪ್ರಭುತ್ವಕ್ಕೆ ಅಪಾಯವನ್ನು ತಂದುಕೊಡಬಹುದು. ಇಂದು ದಲಿತರು, ಹಿಂದುಳಿದ ವರ್ಗದವರು ಅಂಬೇಡ್ಕರ್ ಅವರ ಸಂವಿಧಾನದಿಂದ ಪ್ರಯೋಜನ ಪಡೆದುಕೊಳ್ಳುವಂತಾಗಿದೆ" ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ. ಘಟಕದ ಸಂಯುಕ್ತ ಆಶ್ರಯದಲ್ಲಿ ಕಾಂಗ್ರೆಸ್ ಭವನ ಬ್ರಹ್ಮಗಿರಿಯಲ್ಲಿ ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು.
ಪ್ರಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, "ವಿಶ್ವದಲ್ಲಿಯೇ ಹೆಚ್ಚಿನ ವಿಷಯಗಳ ಬಗ್ಗೆ ಡಾಕ್ಟರೇಟ್ ಪಡೆದ ವ್ಯಕ್ತಿ ಹಾಗೂ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಸರ್ವ ಪ್ರಯತ್ನ ಮಾಡಿದವರು ಅಂಬೇಡ್ಕರ್ ಅವರು" ಎಂದರು.
ಕೆ.ಪಿ.ಸಿ.ಸಿ. ಸಂಯೋಜಕ ನವೀನ್ಚಂದ್ರ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಆರ್.ಜಿ.ಪಿ.ಆರ್.ಎಸ್.ನ ರೋಶನಿ ಒಲಿವರ್, ಜಿಲ್ಲಾ ಕಾಂಗ್ರೆಸ್ನ ಪ್ರಖ್ಯಾತ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶಬ್ಬೀರ್ ಅಹ್ಮದ್, ಹರೀಶ್ ಕಿಣಿ, ಯುವ ಕಾಂಗ್ರೆಸ್ನ ಅಬ್ದುಲ್ ಅಜೀಜ್ ಹೆಜಮಾಡಿ, ಕೀರ್ತಿ ಶೆಟ್ಟಿ, ಎನ್.ಎಸ್.ಯು.ಐ. ಅಧ್ಯಕ್ಷ ಸೌರಭ್ ಬಲ್ಲಾಳ್, ಕೇಶವ ಎಂ, ಕೋಟ್ಯಾನ್, ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಶೆಟ್ಟಿ ಪಾಂಗಾಳ, ಕೃಷ್ಣಮೂರ್ತಿ ಆಚಾರ್ಯ, ಲೂಯಿಸ್ ಲೋಬೋ, ದಿನೇಶ್ ಕೋಟ್ಯಾನ್, ಸದಾಶಿವ ಕಟ್ಟೆಗುಡ್ಡೆ, ಬ್ಲಾಕ್ ಎಸ್.ಸಿ. ಘಟಕದ ಅಧ್ಯಕ್ಷ ಗಣೇಶ್ ನೆರ್ಗಿ, ಮೇರಿ ಡಿ’ಸೋಜಾ, ಜಯಶ್ರೀ ಶೇಟ್, ಶಾಂತಿ ಪಿರೇರಾ, ಸತೀಶ್ ಮಂಚಿ, ಯುವರಾಜ್ ಪುತ್ತೂರು ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಕಾರ್ಯಕ್ರಮ ನಿರ್ವಹಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ವಂದಿಸಿದರು.