ಉಡುಪಿ, ಏ. 14 (DaijiworldNews/SM): ಜಲ್ಲಿಕಲ್ಲು ತುಂಬಿದ ಟಿಪ್ಪರ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಮಧ್ಯಾಹ್ನ ಇಲ್ಲಿನ ಹಿರಿಯಡ್ಕದ ಕುಕ್ಕೇಹಳ್ಳಿ ಬಳಿ ಸಂಭವಿಸಿದೆ.
ಮೃತರನ್ನು ಕೋಟೇಶ್ವರ ನಿವಾಸಿ ಮೊಹಮ್ಮದ್ ಹನೀಫ್(45) ಎಂದು ಗುರುತಿಸಲಾಗಿದೆ. ಅವರು ಕುಕ್ಕೇಹಳ್ಳಿಯಿಂದ ಹಿರಿಯಡ್ಕಗೆ ಪ್ರಯಾಣಿಸುತ್ತಿದ್ದಾಗ ಎದುರು ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ತನ್ನ ಬೈಕ್ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ನಂತರ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ನಂತರ ಆತ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಹಿರಿಯಡ್ಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.