ಕಾಸರಗೋಡು, ಎ.15 (DaijiworldNews/PY): ಹೊರರಾಜ್ಯ ಕಾರ್ಮಿಕನೋರ್ವನ ಮೃತದೇಹ ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಕೋಟಿಕುಳಂನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಕೋಟಿಕುಳಂ ರೈಲ್ವೆ ನಿಲ್ದಾಣ ಪರಿಸರದ ಅಂಗಡಿ ವರಾಂಡದಲ್ಲಿ ಮೃತದೇಹ ಪತ್ತೆಯಾಗಿದ್ದು, ಹೊರರಾಜ್ಯ ಕಾರ್ಮಿಕ ಎಂದು ಶಂಕಿಸಲಾಗಿದೆ. ತಲೆಗೆ ಗಂಭೀರ ಗಾಯವಾಗಿರುವುದು ಕಂಡುಬಂದಿದೆ. ದೇಹದಲ್ಲೂ ಗಾಯ ಕಂಡುಬಂದಿದೆ.
ಬೇಕಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.