ಬೆಳ್ತಂಗಡಿ, ಏ 16 (DaijiworldNews/MS): ಪಿಕಪ್ ಹಾಗೂ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೀಟ್ ಕಾಡಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಏ.16 ರ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತರನ್ನು ತೋಟತ್ತಾಡಿ ಸಮೀಪದ ಕುತ್ರಿಜಾಲ್ ನಿವಾಸಿ ಸುದೀಪ್ ಭಂಡಾರಿ(30) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.