ಮಂಗಳೂರು, ಎ.18 (DaijiworldNews/PY): ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿದ್ದು, "ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆದರೆ, ಕೊರೊನಾದ ಯಾವುದೇ ಪ್ರಮುಖ ಗುಣಲಕ್ಷಣಗಳು ಕಂಡುಬಂದಿಲ್ಲ. ಮುನ್ನೆಚ್ಚರಿಕ ಕ್ರಮವಾಗಿ ಹಾಗೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ" ಎಂದು ಮನವಿ ಮಾಡಿದ್ದಾರೆ.
ಹರೀಶ್ ಕುಮಾರ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಅವರು ಎಪ್ರಿಲ್ 16ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಕೊರೊನಾ ಪಾಸಿಟಿವ್ ವರದಿಯಾಗಿದೆ.
ಹರೀಶ್ ಕುಮಾರ್ ಅವರು ಕೇರಳ ಹಾಗೂ ಎಪ್ರಿಲ್ 16ರಂದು ಬಸವಕಲ್ಯಾಣದಲ್ಲಿ ಉಪಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.