ಉಡುಪಿ, ಏ. 19 (DaijiworldNews/HR): ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವುದು ಸೇರಿದಂತೆ, ಜಿಲ್ಲೆಯಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ, ಜಿಲ್ಲಾಡಳಿತ ಮೂಲಕ ರೆಫರಲ್ ಮಾಡುವ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಶೇ.50 ರಷ್ಟು ಬೆಡ್ಗಳನ್ನು ಮೀಸಲಿಡುವಂತೆಎಲ್ಲ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಕೆಪಿಎಂಇಯಡಿ ನೊಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, "ಜಿಲ್ಲೆಯಲ್ಲಿನ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಬೆಡ್ಗಳ ಸಂಖ್ಯೆಯ ಸಂಪೂರ್ಣ ವಿವರಗಳನ್ನು ಆರೋಗ್ಯ ಇಲಾಖೆಗೆ ನೀಡಬೇಕು. ಆಸ್ಪತ್ರೆಯಲ್ಲಿ ಐಸಿಯು ಬೆಡ್, ಆಕ್ಸಿಜನ್ ಬೆಡ್, ಐಎಫ್ಎನ್ ಬೆಡ್ಗಳು ಸೇರಿದಂತೆಎಲ್ಲಾ ವರ್ಗದ ಬೆಡ್ಗಳಲ್ಲಿ ಶೇ.50 ರಷ್ಟು ಬೆಡ್ಗಳನ್ನು ಮೀಸಲಿಟ್ಟು, ಜಿಲ್ಲಾಡಳಿತದ ರೆಫರಲ್ ಮೂಲಕ ದಾಖಲಾಗುವ ರೋಗಿಗಳಿಗೆ ಸದ್ರಿ ಬೆಡ್ಗಳನ್ನು ನೀಡಬೇಕು. ಆಸ್ಪತ್ರೆಗಳಲ್ಲಿ ವೈದ್ಯಕೀಯ ಯಂತ್ರಗಳು, ಉಪಕರಣಗಳು ಸರಿಇಲ್ಲಎಂದು ಸಬೂಬು ಹೇಳದೆ, ಎಲ್ಲಾ ಯಂತ್ರಗಳು ಮತ್ತು ಉಪಕರಣಗಳು ಸರಿಯಾಗಿಕಾರ್ಯನಿರ್ವಹಿಸುವಂತೆ ಸುಸ್ಥಿತಿಯಲ್ಲಿ ಸಿದ್ಧವಾಗಿಟ್ಟುಕೊಳ್ಳಬೇಕು" ಎಂದು ಡಿಸಿ ಹೇಳಿದರು.
"ಬೆಡ್ ನಿರ್ವಹಣಾ ವ್ಯವಸ್ಥೆಯಡಿ ಎಲ್ಲಾ ಆಸ್ಪತ್ರೆಗಳು ತಮ್ಮಲ್ಲಿ ಲಭ್ಯವಿರುವ ಬೆಡ್ಗಳ ಸಂಖ್ಯೆ ಮತ್ತು ಪ್ರಸ್ತುತ ರೋಗಿಗಳು ಇರುವಬೆಡ್ಗಳ ಸಂಖ್ಯೆಯನ್ನು ಕಡ್ಡಾಯವಾಗಿ ದಾಖಲಿಸಬೇಕು. ಯಾವುದೇ ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದಲ್ಲಿಅಥವಾ ಹೊಸ ರೋಗಿ ದಾಖಲಾದಲ್ಲಿ ಕೂಡಲೇ ಸಾಫ್ಟ್ವೇರ್ನಲ್ಲಿ ದಾಖಲು ಮಾಡಬೇಕು" ಎಂದರು.
ರೆಮಿಡಿಸಿವರ್ ಮತ್ತುಆಕ್ಷಿಜನ್ ಕೊರತೆಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿರುವ ರೋಗಿಗಳಿಗೆ ಅಗತ್ಯ ಪ್ರಮಾಣದಲ್ಲಿ ಮಾತ್ರ ರೆಮಿಡಿಸಿವರ್ ಮತ್ತು ಆಕ್ಸಿಜನ್ ನೀಡುವ ಮೂಲಕ ಅನಗತ್ಯವಾಗಿ ಪೋಲಾಗದಂತೆ ತಡೆಯಬೇಕು. ಆಕ್ಷಿಜನ್ನ್ನು ಸರಿಯಾದ ಪ್ರಮಾಣದಲ್ಲಿ ಬಳಸುವ ಕುರಿತಂತೆ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗೆ ತರಬೇತಿ ಆಯೋಜಿಸಿ, ಯಾವುದೇ ವೈದ್ಯಕೀಯ ಸಿಬ್ಬಂದಿ ಸೋಂಕಿಗೆ ಒಳಗಾಗದಂತೆ ಪಾಲಿಸಬೇಕಾದ ಕ್ರಮಗಳ ಕುರಿತು ಸಹಾ ತರಬೇತಿ ನೀಡುವಂತೆ ಜಿ.ಜಗದೀಶ್ ಸೂಚಿಸಿದರು.
ಇನ್ನು ವೈದ್ಯಕೀಯ ತರಗತಿ ಹೊರತುಪಡಿಸಿ ಉಳಿದ ಎಲ್ಲಾ ತರಗತಿಗಳನ್ನು ನಡೆಸುವುದನ್ನು ಸರ್ಕಾರ ನಿರ್ಭಂದಿಸಿದ್ದು, ಯಾವುದೇ ಆಸ್ಪತ್ರೆಗಳು ಪ್ಯಾರಾ ಮೆಡಿಕಲ್ ಮತ್ತು ನರ್ಸಿಂಗ್ ತರಗತಿಗಳನ್ನು ನಡೆಸುವಂತಿಲ್ಲ. ಅಗತ್ಯವಿದ್ದಲ್ಲಿಆನ್ಲೈನ್ ಮೂಲಕತರಗತಿ ನಡೆಸಬಹುದು.ನರ್ಸಿಂಗ್ ವಿದ್ಯಾರ್ಥಿಗಳು ಕೇರಳಕ್ಕೆ ಹೋಗಿ ಬರುವುದನ್ನುತಡೆಯಲುಅಗತ್ಯಕ್ರಮ ಕೈಗೊಳ್ಳುವಂತೆ ಡಿಸಿ ಸೂಚಿಸಿದರು.
ಜಿಲ್ಲೆಯಲ್ಲಿ ಯಾವುದೇ ರೋಗಿಯೂ ಕೊರೊನಾದಿಂದ ಮೃತಪಡದಂತೆ ಎಲ್ಲಾ ವೈದ್ಯರು ತಮ್ಮ ಶ್ರಮ ಮೀರಿ ಕಾರ್ಯನಿರ್ವಹಿಸುವ ಮೂಲಕ, ಜಿಲ್ಲೆಯಲ್ಲಿ ಆದಷ್ಟು ಸಾವುಗಳಾಗುವುದನ್ನು ತಡೆಯಬೇಕು. ಮೃತದೇಹಗಳ ವಿಲೇವಾರಿಯಲ್ಲಿ ಯಾವುದೇ ಗೊಂದಲಗಳಾಗದಂತೆ ಎಚ್ಚರವಹಿಸುವಂತೆ ಡಿಸಿ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಅಪರಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್ಓ ಡಾ.ಸುದೀರ್ಚಂದ್ರ ಸೂಡಾ, ಜಿಲ್ಲಾ ಕೊರೊನಾ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕೆಪಿಎಂಇ ನೊಂದಾಯಿತ ಆಸ್ಪತ್ರೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.