ಉಡುಪಿ, ಏ. 19 (DaijiworldNews/SM): ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಮತ್ತೆ ಫೀಲ್ಡಿಗಿಳಿದಿದ್ದಾರೆ. ಮಾಸ್ಕ್ ಹಾಕದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಉಡುಪಿ ತಾಲೂಕಿನ ಸಂತೆಕಟ್ಟೆಯಲ್ಲಿ ಮಾಸ್ಕ್ ಹಾಕದವರ ವಿರುದ್ಧ ದಂಡ ಹಾಕಿದ ಘಟನೆ ಕೂಡ ನಡೆದಿದೆ. ಪ್ರಯಾಣಿಕರನ್ನ ತುಂಬಿ ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಬಸ್ಸುಗಳನ್ನು ತಡೆದು ದಂಡದ ಜೊತೆಗೆ ಚಾಲಕ ಹಾಗೂ ನಿರ್ವಾಹಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
ನಿಂತು ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನ ಬಸ್ ನಿಂದ ಕೆಳಗಿಳಿಸಿದ್ದು, ಮಾಸ್ಕ್ ಹಾಕದವರ ಮೇಲೆ ದಂಡ ವಿಧಿಸಿದ ಪ್ರಸಂಗ ಕೂಡ ನಡೆದಿದೆ. ಅಂಗಡಿ ಮಾಲಕರು, ಮೆಡಿಕಲ್, ಬ್ಯಾಂಕ್ ಗಳ ಮೇಲೆ 5ಸಾವಿರ ದಂಡ ವಿಧಿಸಲಾಗಿದೆ. ಅಲ್ಲದೆ, ಮಾಸ್ಕ್ ಹಾಕದ ಸಾರ್ವಜನಿಕರ ಮೇಲೂ ದಂಡ ವಿಧಿಸಿದ್ದಾರೆ. ಇನ್ಮುಂದೆ ಹೆಚ್ಚುವರಿ ಪ್ರಯಾಣಿಕರನ್ನ ಕರೆದುಕೊಂಡು ಹೋದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ನೀಡಿದ್ದಾರೆ.
ಇನ್ನು ಈ ನಡುವೆ ಬಸ್ಸಿನಿಂದ ಕೆಳಗಿಸಿ ತೆರಳಿದ ಜಿಲ್ಲಾಧಿಕಾರಿಗಳ ವಿರುದ್ದ ವಿದ್ಯಾರ್ಥಿನಿಯರು ಅಸಮಧಾನ ವ್ಯಕ್ತಪಡಿಸಿರುವ ಘಟನೆ ಕೂಡ ನಡೆದಿದೆ.