ಮಂಗಳೂರು, ಏ 20(DaijiworldNews/MS): ನಗರದ ಪಂಪ್ ವೆಲ್ ಮೇಲ್ಸೆತುವೆ ಯ ಗೋಡೆಯ ಸೌಂದರ್ಯ ಕೆಡುವಂತೆ ಅವಹೇಳನಕಾರಿ ಬರಹವೊಂದು ಏ.20ರ ಮಂಗಳವಾರ ಮುಂಜಾನೆ ಪತ್ತೆಯಾಗಿದೆ.
ಕರ್ನಾಟಕ ಬ್ಯಾಂಕ್ ಹೆಡ್ ಆಫೀಸ್ ಮುಂಭಾಗದಲ್ಲಿರುವ ಪಂಪವೆಲ್ ಫ್ಲೈ ಓವರ್ ಗೋಡೆ ಮೇಲೆ ಕಿಡಿಗೇಡಿಗಳು ಅವಹೇಳನಕಾರಿ ಪದ ಹಾಗೂ ಲಾಕ್ ಡೌನ್ ಬೇಕಾಗಿದೆ ಎನ್ನುವ ಬರಹವನ್ನು ಕೆಂಪು ಬಣ್ಣದಲ್ಲಿ ದೊಡ್ಡದಾಗಿ ಬರೆದಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ , "ಪಂಪವೆಲ್ ಫ್ಲೈ ಓವರ್ ಗೋಡೆ ಮೇಲೆ ಬರಹ ಬರೆದ ಘಟನೆ ಇಲಾಖೆಯ ಗಮನಕ್ಕೆ ಬಂದಿದ್ದು ಈ ಬಗ್ಗೆ ತನಿಖೆ ನಡೆಸುತ್ತೇವೆ" ಎಂದಿದ್ದಾರೆ.