ಮಂಗಳೂರು, ಎ.21 (DaijiworldNews/PY): ಆಟವಾಡುತ್ತಿದ್ದ ಸಂದರ್ಭ ಸಿಡಿಲು ಬಡಿದು ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಇಬ್ಬರು ಮಕ್ಕಳ ಪೈಕಿ ಓರ್ವ ಬಾಲಕ ಬುಧವಾರ ಸಾವನ್ನಪ್ಪಿದ್ದಾನೆ.
ಮೃತ ಬಾಲಕನನ್ನು ಇಂದಿರಾನಗರ ನಿವಾಸಿ ಮನ್ಸೂರ್ ಎಂಬುವರ ಪುತ್ರ ನಿಹಾನ್ (5) ಎಂದು ಗುರುತಿಸಲಾಗಿದೆ. ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ತೀವ್ರ ನಿಗಾಘಟಕದಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾ ಸ್ಥಿತಿಯಲ್ಲಿದ್ದಾನೆ ಎಂದು ತಿಳಿದುಬಂದಿದೆ.
ಎಪ್ರಿಲ್ 20ರ ಮಂಗಳವಾರ ಸಂಜೆ ಮನೆಯ ಹತ್ತಿರ ಆಟವಾಡುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಮಕ್ಕಳು ಸ್ಥಳದಲ್ಲಿಯೇ ಮೂರ್ಛೆ ಹೋಗಿದ್ದು, ನಂತರ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.