ಬೆಳ್ತಂಗಡಿ, ಎ.22 (DaijiworldNews/PY): ಶಾಲೆಗೆ ಹೋಗಿ ಪುಸ್ತಕ ತೆಗೆದುಕೊಂಡು ಬರುತ್ತೇನೆ ಎಂದು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಬೆಳ್ತಂಗಡಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಮೇಲಂತಬೆಟ್ಟು ಗ್ರಾಮದ ಗೋಳಿದಪಲ್ಕೆ ನಿವಾಸಿ ಸಂಜೀವ ಅವರ ಪುತ್ರಿ ಶರಣ್ಯಾ (15) ಎಪ್ರಿಲ್ 19 ಸೋಮವಾರ ಶಾಲೆಗೆ ಹೋಗಿ ಪುಸ್ತಕ ತೆಗೆದುಕೊಂಡು ಬರುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದರು.
ತಾಯಿಯ ಆರೋಗ್ಯ ಸಮಸ್ಯೆ ಗಮನಿಸಿದ ಆಕೆ ಶಾಲೆಗೆ ತೆರಳಲಾಗದೇ ಬೇಸರಗೊಂಡು ಸಂಬಂಧಿಕರ ಮನೆಗೆ ತೆರಳಿದ್ದಾಗಿ ಬಾಲಕಿ ತಿಳಿಸಿದ್ದಾಳೆ.
ಈ ವಿಚಾರ ತಿಳಿದ ಆಕೆಯ ಪೋಷಕರು ಆಕೆಗೆ ಬುದ್ದಿವಾದ ಹೇಳಿ ಮನೆಗೆ ಕರೆದುಕೊಂಡು ಬಂದಿದ್ದಾರೆ.