ಮಂಗಳೂರು, ಎ.22 (DaijiworldNews/PY): ಸಿಡಿಲು ಬಂಡಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಸಾಂದರ್ಭಿಕ ಚಿತ್ರ
ಹಳೆಯಂಗಡಿ ಇಂದಿರಾನಗರ ಬಳಿ ಮಂಗಳವಾರ ಸಂಜೆ ಆಟವಾಡುತ್ತಿದ್ದ ಸಂದರ್ಭ ಇಬ್ಬರು ಮಕ್ಕಳಿಗೆ ಸಿಡಿಲು ಬಡಿದಿದ್ದು, ನಿಹಾನ್ ಹಾಗೂ ಮಾರುತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಪೈಕಿ ಹೆಜಮಾಡಿ ನಿವಾಸಿ ಮನ್ಸೂರ್ ಎಂಬವರ ಪುತ್ರ ನಿಹಾನ್ (5) ಎಪ್ರಿಲ್ 21ರ ಬುಧವಾರ ಬೆಳಗ್ಗೆ ಮೃತಪಟ್ಟಿದ್ದ.