ಮಂಗಳೂರು, ಏ.22 (DaijiworldNews/MB) : ಬೈಕ್ನ ಹಿಂಬದಿಗೆ ನಾಯಿಯನ್ನು ಕಟ್ಟಿ ದುಷ್ಕರ್ಮಿಗಳಿಬ್ಬರು ರಸ್ತೆಯುದ್ದಕ್ಕೂ ಎಳೆದುಕೊಂಡು ಹೋಗಿರುವ ಅಮಾನುಷ ಘಟನೆ ಎನ್ಐಟಿಕೆ ಸುರತ್ಕಲ್ ಬಳಿಯಲ್ಲಿ ನಡೆದಿದೆ.
ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನಾಯಿಗೆ ಹಿಂಸೆ ನೀಡಿ ಸಂತೋಷ ಪಡುವ ಈ ಕಿಡಿಗೇಡಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಇನ್ನು ಈ ಘಟನೆಯು 2021 ರ ಏಪ್ರಿಲ್ 15 ರಂದು ನಡೆದಿದೆ ಎಂದು ಹೇಳಲಾಗಿದೆ.
ಈ ಇಬ್ಬರು ದುರುಳರನ್ನು ಹುಡುಕಿ ಪೊಲೀಸರಿಗೆ ಒಪ್ಪಿಸಲು ಸಹಕರಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕೋರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ಡಿಸಿಪಿ ಹರಿರಾಮ್ ಶಂಕರ್, "ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದ್ದಾರೆ.