ಮಂಗಳೂರು, ಏ.23 (DaijiworldNews/HR): ಬೈಕ್ನ ಹಿಂಬದಿಗೆ ನಾಯಿಯನ್ನು ಕಟ್ಟಿ ದುಷ್ಕರ್ಮಿಗಳಿಬ್ಬರು ರಸ್ತೆಯುದ್ದಕ್ಕೂ ಎಳೆದುಕೊಂಡು ಹೋಗಿರುವ ಅಮಾನುಷ ಘಟನೆ ಎನ್ಐಟಿಕೆ ಸುರತ್ಕಲ್ ಬಳಿಯಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸುರತ್ಕಲ್ನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದ ಕೊಪ್ಪಳ ಮೂಲದ ನೀಲಪ್ಪ(30 ) ಎಂದು ಗುರುತಿಸಲಾಗಿದೆ.
ಬೈಕ್ನ ಹಿಂಬದಿಗೆ ನಾಯಿಯನ್ನು ಕಟ್ಟಿ ದುಷ್ಕರ್ಮಿಗಳಿಬ್ಬರು ಉತ್ತರ ಕರ್ನಾಟಕ ಮೂಲದವರಾಗಿದ್ದು, ದಾರಿಹೋಕರಾದ ಜೀವನ್ ಈ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಪ್ರಸಾರ ಮಾಡಿದ್ದರು. ನಂತರ ಜೀವನ್ ಉಪಸ್ಥಿತಿಯಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ದೂರಿನ ಬಳಿಕ ಅಪರಾಧಿಗಳಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬನಿಗೆ ಹುಡುಕಾಟ ನಡೆಸುತ್ತಿದ್ದಾರೆ.
ಪೊಲೀಸ್ ಕಮಿಷನರ್ ಶಶಿ ಕುಮಾರ್ ನೇತೃತ್ವದ ನಗರ ಪೊಲೀಸರು ಮತ್ತು ಪೊಲೀಸ್ ಉಪ ಆಯುಕ್ತರಾದ ಹರಿರಾಮ್ ಶಂಕರ್ ಮತ್ತು ವಿನಯ್ ಗೌಂಕರ್ ಅವರ ತ್ವರಿತ ಕ್ರಮಕ್ಕಾಗಿ ಶ್ಲಾಘನೆ ವ್ಯಕ್ತವಾಗಿದೆ.