ಉಡುಪಿ, ಏ.23 (DaijiworldNews/HR): ಜಲ್ಲಿ ತುಂಬಿದ್ದ ಲಾರಿಯೊಂದು ಬ್ರೇಕ್ ಜಾಮ್ ಆಗಿ ಕಾರಿನ ಮೇಲೆ ಮಗುಚಿದ ಘಟನೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ನಲ್ಲಿ ನಡೆದಿದೆ.
ಬ್ರೇಕ್ ಜಾಮ್ ಆದ ಕಾರಣ ಲಾರಿಯು ಉಡುಪಿಯಿಂದ ಮಣಿಪಾಲದ ಕಡೆಗೆ ಬರುತಿದ್ದ ಕಾರಿನ ಮೇಲೆ ಮಗುಚಿದ್ದು, ಕಾರಿನ ಮುಂಭಾಗಕ್ಕೆ ಹಾನಿ ಉಂಟಾಗಿದ್ದು, ಲಾರಿ ಸಂಪೂರ್ಣ ನಜ್ಜುಗುಜ್ಜುಗಿದೆ ಎಂದು ತಿಳಿದು ಬಂದಿದೆ.
ಇನ್ನು ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಗಿದ್ದು, ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ ಎನ್ನಲಾಗಿದೆ.