ಕುಂದಾಪುರ, ಎ.23 (DaijiworldNews/PY): ಕೊರೊನಾ ಮಾರ್ಗ ಸೂಚಿ ಹಾಗೂ ಜಿಲ್ಲಾಡಳಿತ ಆದೇಶ ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದ ಸ್ಟೋರ್ ಮೇಲೆ ಪುರಸಭೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಲ್ಲಿನ ಹಳೆ ಬಸ್ ನಿಲ್ದಾಣದ ಸಮೀಪ ಕಂಗನ್ ಸ್ಟೋರ್ನಲ್ಲಿ ಕೊರೊನಾ ಮಾರ್ಗ ಸೂಚಿ ಹಾಗೂ ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಶಟರ್ ಎಳೆದುಕೊಂಡು ಒಳಗೆ ವ್ಯಾಪಾರ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಪುರಸಭೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಿಲ್ಲಾಡಳಿತದ ಆದೇಶದ ಅನ್ವಯ, ಸ್ಟೋರ್ಗಳನ್ನು ತೆರೆಯುವಂತಿಲ್ಲ. ಆದರೂ ಕೂಡಾ ಬಾಗಿಲು ಮುಚ್ಚಿಕೊಂಡು ಒಳಗಡೆ ವ್ಯಾಪಾರ ಮಾಡಲಾಗುತ್ತಿತ್ತು. ಈ ಸಂದರ್ಭ ಪುರಸಭೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಕ್ರಮ ಜರುಗಿಸಿದ್ದಾರೆ.