ಮಂಗಳೂರು, ಏ 24 (DaijiworldNews/MS): ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯಾಂದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದು ಶುಕ್ರವಾರ ರಾತ್ರಿ ಒಂಬತ್ತರಿಂದ ಸೋಮವಾರ ಬೆಳಗ್ಗೆ 6ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ.ಈ ಸಂದರ್ಭದಲ್ಲಿ ಅಗತ್ಯ ದಾಖಲೆಗಳೊಂದಿಗೆ ಕೊರೊನಾ ರೋಗ ನಿರೋಧಕ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿರುವ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಪ್ರತಿದಿನ ಸುಮಾರು ಐದರಿಂದ ಆರು ಸಾವಿರ ಮಂದಿಗೆ ಲಸಿಕೆ ನೀಡಲಾಗುತ್ತದೆ. ಪ್ರತಿ ಕೇಂದ್ರದಲ್ಲಿಯೂ ದಿನಕ್ಕೆ ಅಂದಾಜು 100 ರಿಂದ 150 ಮಂದಿ ಲಸಿಕೆ ಪಡೆಯುತ್ತಾರೆ. ಆದರೆ ವೀಕೆಂಡ್ ಕರ್ಪ್ಯೂ ಭೀತಿಯಿಂದಾಗಿ ಕೆಲವು ಕೇಂದ್ರಗಳಲ್ಲಿ ಶುಕ್ರವಾರ ಬೆಳಗ್ಗೆ 200ರಿಂದ 300 ಮಂದಿ ಲಸಿಕೆ ಪಡೆಯಲು ಕಾದು ನಿಂತಿದ್ದರು.
ಶುಕ್ರವಾರ ಹಲವು ಲಸಿಕಾ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ ಪರಿಣಾಮ ಸಾಮಾಜಿಕ ಅಂತರ ಪಾಲಿಸಿರಲಿಲ್ಲ.ಶನಿವಾರ ಮತ್ತು ಭಾನುವಾರ ಲಸಿಕೆ ಇರುವುದಿಲ್ಲ ಎಂಬ ತಪ್ಪು ಮಾಹಿತಿಯಿಂದಾಗಿ ಕೇಂದ್ರಕ್ಕೆ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಜನರು ಲಸಿಕೆ ಪಡೆಯಲು ಆಗಮಿಸಿದ್ದಾರೆ. ಆದರೆ ಸೂಕ್ತ ದಾಖಲೆಗಳೊಂದಿಗೆ ವಾರಂತ್ಯದಲ್ಲಿಯು ಲಸಿಕೆ ಪಡೆಯಲು ಅವಕಾಶ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರು ಕೊರೊನಾ ಲಸಿಕೆ ಪಡೆದು ವಿಕೇಂಡ್ ಕರ್ಪ್ಯೂ ವನ್ನು ಸದುಪಯೋಗಪಡಿಸಿಕೊಳ್ಳಬಹುದು.