ಮಂಗಳೂರು, ಎ.24 (DaijiworldNews/PY): ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಇದು ಶುಕ್ರವಾರ ರಾತ್ರಿಯಿಂದಲೇ ಆರಂಭವಾಗಿದೆ. ಈ ಹಿನ್ನೆಲೆ ಶನಿವಾರ ಬೆಳಗ್ಗೆ 6 ರಿಂದ 4 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಹಾಲು, ತರಕಾರಿ ಮುಂತಾದ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 10 ಗಂಟೆಯವರೆಗೆ ಅವಕಾಶ ನೀಡಲಾಗಿದ್ದು, ಬಳಿಕ ಎಲ್ಲವೂ ಬಂದ್ ಆಗಲಿವೆ.
ನಗರದ ಸೆಂಟ್ರಲ್ ಮಾರುಕಟ್ಟೆ ಸೇರಿದಂತೆ ಸೂಪರ್ ಮಾರುಕಟ್ಟೆಗಳು ತೆರದಿದ್ದು, ಬೆರಳೆಣಿಕೆಯ ಜನ ಇದ್ದರು. ಇನ್ನು ನಗರದ ಸ್ಟೇಟ್ ಬ್ಯಾಂಕ್ ಬಳಿಯ ಮೀನು ಮಾರುಕಟ್ಟೆ ಗ್ರಾಹಕರಿಲ್ಲದೇ ಬಿಕೋ ಎನ್ನುತ್ತಿತ್ತು.
ವೀಕೆಂಡ್ ಕರ್ಫ್ಯೂ ಸಂದರ್ಭ ಅನಗತ್ಯವಾದ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಹಣ್ಣು, ತರಕಾರಿ ಖರೀದಿ, ಪತ್ರಿಕೆ ಮಾರಾಟ ಹಾಗೂ ಪತ್ರಿಕೆ ಮಾರಾಟ ಹಾಗೂ ಹೊಟೇಲ್ ಪಾರ್ಸೆಲ್ ಸೇವೆಗೆ ಅವಕಾಶವಿದೆ. 10 ಗಂಟೆಯ ಬಳಿಕ ಜಿಲ್ಲೆಯಾದ್ಯಂತ ಅಗತ್ಯ ಸಂಚಾರ ಹೊರತುಪಡಿಸಿ ಉಳಿದಂತೆ ಎಲ್ಲಾ ಬಂದ್ ಆಗಲಿವೆ.