ಉಡುಪಿ, ಏ.24 (DaijiworldNews/HR): ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಇಂದಿನಿಂದ ಕರ್ನಾಟಕದಲ್ಲಿ ವೀಕೆಂಡ್ ಲಾಕ್ಡೌನ್ ಜಾರಿಗೊಳಿಸಿದ್ದು, ಉಡುಪಿಯಲ್ಲಿ ಸಂಪೂರ್ಣ ಸ್ತಬ್ದ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿದು ಬಂದಿದೆ.
ಉಡುಪಿಯು ಸಂಪೂರ್ಣ ಸ್ತಬ್ದವಾಗಿದ್ದು, ಜನರಿಲ್ಲದೇ ರಸ್ತೆಗಳೆಲ್ಲವೂ ಬಿಕೋ ಎನ್ನುತ್ತಿದ್ದು, ಅಗತ್ಯ ವಸ್ತುಗಳ ಅಂಗಡಿ ಹೊರತುಪಡಿಸಿ ಬೇರೆಲ್ಲಾ ಬಂದ್ ಮಾಡಲಾಗಿದೆ.
ಇನ್ನು ಹಾಲು, ದಿನಸಿ, ಮೆಡಿಕಲ್ ಶಾಪ್ ಹೊರತುಪಡಿಸಿ ಬೇರೆಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ದೂರದೂರಿನ ಬಸ್ಸುಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದ್ದು, ಮೈಸೂರು, ಬೆಂಗಳೂರು, ಹಾವೇರಿ, ಶಿವಮೊಗ್ಗ ಕ್ಕೆ ಬೆರಳಣಿಕೆಯ ಕೆಎಸ್ಆರ್ಟಿಸಿ ಬಸ್ ಸಂಚಾರ ನಡೆಸುತ್ತಿದೆ.
ಉಳಿದಂತೆ ಎಲ್ಲಾ ಸರ್ವಿಸ್, ಸಿಟಿ, ಎಕ್ಸ್ಪ್ರೆಸ್ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪೋಲಿಸರು ಅಲ್ಲಲ್ಲಿ ತಪಾಸಣೆ ನಡೆಸುತ್ತಿದ್ದು, ಅನಗತ್ಯ ಸಂಚರಿಸುವವರ ವಿಚಾರಣೆ ನಡೆಸುತ್ತಿದ್ದಾರೆ.