ಬೆಳ್ಮಣ್, ಏ 24 (DaijiworldNews/MS): ಯಾವುದೋ ವಿಷ ಪದಾರ್ಥ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೋಳ ಗ್ರಾಮದ ನಡಿಬೆಟ್ಟು ಎಂಬಲ್ಲಿ ನಡೆದಿದೆ.
ಬೋಳ ನಡಿಬೆಟ್ಟು ಎಂಬಲ್ಲಿ ಕಾಡಿನ ಮಧ್ಯೆ ಮೃತದೇಹ ಪತ್ತೆಯಾಗಿದ್ದು , ಕಾರ್ಕಳ ಮಾಳ ಹುಕ್ರಟ್ಟೆ ನಿವಾಸಿ ಪ್ರಭಾಕರ ಪೂಜಾರಿ 50 ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದ್ದು ನನ್ನ ಸಾವಿಗೆ ನಾನೇ ಕಾರಣ ಮಕ್ಕಳೇ ಕ್ಷಮಿಸಿ ಎಂದು ಬರೆಯಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.