ಉಡುಪಿ, ಏ 24 (DaijiworldNews/MS): ಮಾಸ್ಕ್ ಧರಿಸಿದೆ ಡಿಸಿಯವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ಕುರಿತು ಜಿಲ್ಲಾಧಿಕಾರಿ ಜಿ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ. ಸ್ವತಃ ಡಿಸಿಯವರೇ ಮಾಸ್ಕ್ ಧರಿಸದೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಜನಸಾಮಾನ್ಯರಿಗೊಂದು ನ್ಯಾಯ ಅಧಿಕಾರಿಗಳಿಗೊಂದು ನ್ಯಾಯವೇ ಎಂದು ಜನರು ಪ್ರಶ್ನೆ ಮಾಡಿದ್ದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರ ಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್ ಭಾಗವಹಿಸಿದ್ದು ಅದಕ್ಕೆ ಸ್ಪಷ್ಟನೆ ನೀಡಿದ್ದು" ಅದು ಸಾರ್ವಜನಿಕವಾಗಿ ಕಾರ್ಯಕ್ರಮ ಅಲ್ಲ. ಅದು ಮನೆಯಲ್ಲಿ ಮಾಡಿರುವ ಕಾರ್ಯಕ್ರಮ. ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಕೇವಲ ಕುಟುಂಬಕ್ಕೆ ಹತ್ತಿರವಾಗಿದ್ದವರನ್ನು ಮಾತ್ರ ಆಹ್ವಾನಿಸಲಾಗಿತ್ತು. ಖಾಸಗಿ ಕಾರ್ಯಕ್ರಮದಲ್ಲಿ ಮಾಸ್ಕ್ ಹಾಕಬೇಕಿಲ್ಲ. ನನ್ನ ಮನೆಯ ಪಕ್ಕದಲ್ಲೇ ಕಾರ್ಯಕ್ರಮಿದ್ದದ್ದು. ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕಾರಿಯವರ ಮಗಳ ಜೀವನದ ಅತ್ಯಂತ ಖುಷಿಯ ಕ್ಷಣ. ನಾಲ್ಕು ಮನೆಯ ಕುಟುಂಬಸ್ಥರು ಹೆಚ್ಚು ಕಮ್ಮಿ 20 ಮಂದಿ ಅದರಲ್ಲಿ ಭಾಗಿಯಾಗಿದ್ದರು. ನಾನು ಊಟಕ್ಕೂ ನಿಲ್ಲದೆ, ಐದಾರು ನಿಮಿಷವಷ್ಟೇ ಇದ್ದು ಹೊರಟೆ . ಕೇವಲ ಫೋಟೋಕ್ಕಾಗಿ ಮಾತ್ರ ಮಾಸ್ಕನ್ನು ತೆಗೆದು ಹಾಕಿಕೊಂಡಿದ್ದೇನೆ. ಸೀಮಿತ ಅವಧಿ ಮಾತ್ರ ಇದ್ದೆ ಅಷ್ಟೆ, ಎಂದು ಸ್ಪಷ್ಟನೆ ನೀಡಿದ್ದಾರೆ.
ಡಿಸಿಯವರು ಕಳೆದ ಬಾರಿ ಏಪ್ರಿಲ್ 18 ರಂದು ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಬಸ್ಸನ್ನು ತಡೆದು ನಿಲ್ಲಿಸಿದಂದಿನಿಂದ ಅವರ ವಿರೋಧವಾಗಿ ನೆಟ್ಟಿಗರು ಬಾರಿ ವಿರೋಧ ವ್ಯಕ್ತ ಪಡಿಸಿದ್ದಾರೆ. ಮಾಧ್ಯಮದವರು ಈ ಸಾಮಾಜಿಕ ಜಾಲತಾಣ ಪ್ರತಿಕ್ರಿಯೆ ಬಗ್ಗೆ ಕೇಳಿದಾಗ ಅವರು , ಕೆಲವೊಂದು ತಂಡ ಉದ್ದೇಶಪೂರ್ವಕವಾಗಿ ನನ್ನ ಅಭಿವೃದ್ಧಿ ಮತ್ತು ಕೆಲಸದ ಬಗ್ಗೆ ಟೀಕೆ ಮಾಡುವ ಕೆಲಸ ಮಾಡುತ್ತಿದೆ. ಅಲ್ಲದೆ ಅಪಪ್ರಚಾರ ಮೂಡಿಸುವ ಕೆಲಸ ನಿರಂತರವಾಗಿ ಮಾಡುತ್ತಿದೆ ಎಂದು ಡಿಸಿಯವರು ಸಾಂದರ್ಭಿಕವಾಗಿ ಹಂಚಿಕೊಂಡಿದ್ದರು.
ಉಡುಪಿ: ಕೋವಿಡ್ ನಿಯಮ ಉಲ್ಲಂಘಿಸಿದರೇ ಜಿಲ್ಲಾಧಿಕಾರಿ ? - ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ