ಉಡುಪಿ, ಏ. 24 (DaijiworldNews/SM): ನಗರದಲ್ಲಿ ವಾರಾಂತ್ಯ ಕರ್ಫ್ಯೂ ಇದ್ದ ಕಾರಣ ತೀರಾ ಅಸಹಾಯಕರಿಗೆ, ಅನಾರೋಗ್ಯ ಪೀಡಿತರಿಗೆ, ವೃದ್ದರು ಅಂಗವಿಕಲರು, ಮಾನಸಿಕ ಅಸ್ವಸ್ಥರಿಗೆ, ಊಟ ಸಿಗದ ಅಸಹಾಯಕರಿಗೆ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಊಟ ವಿತರಿಸಿ ಹಸಿದವರ ಹಸಿವು ನಿಗಿಸಿದರು.
ಆದಿಉಡುಪಿ, ಪಂದುಬೆಟ್ಟು, ಕರಾವಳಿ ಬೈಪಾಸ್, ಶಿರಿಬೀಡು, ರಥಬೀದಿ, ರಾಜಾಂಗಣ ವಾಹನ ನಿಲುಗಡೆ ಸ್ಥಳ, ಕಿನ್ನಿಮುಲ್ಕಿ, ಬಲಾಯಿಪಾದೆ, ರೈಲ್ವೆ ನಿಲ್ದಾಣ, ನಗರದ ಮುಖ್ಯ ನಾಲ್ಕು ಬಸ್ಸು ನಿಲ್ದಾಣದಲ್ಲಿ ಆಹಾರದ ವಿತರಣೆಯು ವಿಶು ಶೆಟ್ಟಿ ಅವರಿಂದ ನಡೆಯಿತು.
ಪಾರ್ಸೆಲ್ ಊಟ ಪಡೆಯಲು ಹೋಟೆಲಿನಲ್ಲಿ ಅವಕಾಶವಿದ್ದರೂ ಬಹುತೇಕ ಹೋಟೆಲುಗಳು ಮುಚ್ಚಿರುವುದರಿಂದ ನಗರ ಪ್ರದೇಶದಲ್ಲಿ ಬದುಕುವ ವಲಸೆ ಕಾರ್ಮಿಕ ವರ್ಗದವರಿಗೆ ಬಹಳಷ್ಟು ಅನಾನುಕೂಲವಾಗಿತ್ತು. ನಾಳೆಯ ದಿನವು ಇಂತಹ ಅಸಹಾಯಕರಿಗೆ ಊಟ ವಿತರಿಸುವ ಕಾರ್ಯ ನಡೆಯಲಿದೆ ಎಂದು ವಿಶು ಶೆಟ್ಟಿ ಅವರು ಹೇಳಿದ್ದಾರೆ.