ಮಂಗಳೂರು, ಏ 26(DaijiworldNews/MS): ಕೇಂದ್ರ ಮತ್ತು ರಾಜ್ಯ ಸರಕಾರಗಳ ದೂರದೃಷ್ಟಿ ಮತ್ತು ಯೋಜನೆ ರಹಿತ ತೀರ್ಮಾನಗಳಿಂದ ದೇಶ ಮತ್ತು ರಾಜ್ಯದಲ್ಲಿ ಕೊರೊನಾ ನಿರ್ಬಂಧಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಕೋವಿಡ್ ನಿಂದ ಅತಿಹೆಚ್ಚಿನ ಸಂಖ್ಯೆಯ ಮಂದಿ ಬೆಂಗಳೂರಲ್ಲಿ ಸಾವನ್ನಪ್ಪುತ್ತಿದ್ದಾರೆ. ಇದಕ್ಕೆಲ್ಲಾ ಆಕ್ಸಿಜನ್ ಕಾರಣ ಎಂದು ಸರ್ಕಾರ ಒಪ್ಪಿಕೊಂಡಿದೆ. ಆದರೆ ರಾಜ್ಯದಲ್ಲಿ ಸೋಂಕಿತರಿಗೆ ಬೇಕಾದ ಅಮ್ಲಜನಕ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿಲ್ಲ. ಸರ್ಕಾರ ಕೈ ಕಟ್ಟಿ ಕುಳಿತಿದ್ದು ಇದಕ್ಕೆಲ್ಲಾ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ.
ಏ.೨೬ ರ ಸೋಮವಾರ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಕೋವಿಡನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಲ್ಲಿ ಇವತ್ತು 150 ಕ್ಕಿಂತಲೂ ಹೆಚ್ಚಿನ ಮಂದಿ ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ಆಕ್ಸಿಜನ್ ಕೊರತೆಯೇ ಕಾರಣ ಎಂದರು.
ಆಕ್ಸಿಜನ್ ನ್ನು ಕೇಂದ್ರ ಸರ್ಕಾರದಿಂದ ಪಡೆಯಲು ನಮ್ಮ ಕೇಂದ್ರ ಸಚಿವರು, ಸಂಸದರು ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಸ್ಮಶಾನಕ್ಕೆ ಎಷ್ಟು ಮಂದಿ ಹೋಗಬೇಕು ಎಂದು ಸರ್ಕಾರ ಚರ್ಚೆ ಮಾಡುತ್ತಿದೆಯೇ ಹೊರತು ಈ ರೋಗವನ್ನು ನಿಯಂತ್ರಿಸಲು ಬೇಕಾದ ವ್ಯವಸ್ಥೆ ಮಾಡುತ್ತಿಲ್ಲ ಎಂದು ಕಿಡಿಕಾರಿದ ಅವರು ಎಷ್ಟು ಹಣವನ್ನು ಈ ರೋಗದ ನಿಯಂತ್ರಣಕ್ಕೆ ಬಳಸಿದೆ ಎಂದು ಪ್ರಶ್ನಿಸಿದರು
ಕೊರೊನಾ ಸೋಂಕಿತರು ಬೆಂಗಳೂರಿನಲ್ಲಿ ಆಕ್ಸಿಜನ್ ಪೂರೈಕೆಯ ಸಿಗದ ಕಾರಣ ಚಿಕಿತ್ಸೆ ಪಡೆಯಲು ಬೆಡ್ ಸವಲತ್ತು ಇಲ್ಲದೆ ಇರುವುದರಿಂದ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಗುಳೆ ಹೋಗುತ್ತಿದ್ದಾರೆ. ಅನೇಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಮಂಗಳೂರು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ ಮಾಡುವ ಬೆಡ್ ಗಳನ್ನುಳನ್ನು ಪಡೆದು ಚಿಕಿತ್ಸೆ ಪಡೆಯುತ್ತಿದ್ದಾರೆ ಆದರೆ ಆರೋಗ್ಯ ಸಚಿವರು ಬೆಂಗಳೂರು ಸಹಿತ ಇತರ ಜಿಲ್ಲೆಗಳಲ್ಲಿ ಆಕ್ಸಿಜನ್ ಕೊರತೆಯಿಲ್ಲ ಎಂದು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ವಿಚಾರ
. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಕ್ಕೆ 500 - 600 ಮಂದಿ ಕೊರೋನಾ ಸೋಂಕಿತರು ಪತ್ತೆಯಾಗಿದ್ದು ಜಿಲ್ಲೆಗಳಲ್ಲಿ ಕೇವಲ 3500 ಬೆಡ್ ಗಳು ಮಾತ್ರ ಲಭ್ಯವಿರುತ್ತದೆ ಇವುಗಳಲ್ಲಿ ೩೦೦ ಬೆಡ್ ಗಳಿ ಐಸಿಯು ಬೆಡ್ ಆದರೆ ೨74 ಆಕ್ಸಿಜನ್ ಬೆಡ್ ಗಳು ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ಓಬಿಸಿ ರಾಜ್ಯ ವಕ್ತಾರ ಗಣೇಶ್ ಪೂಜಾರಿ, ಎಸ್.ಕೆ ಸೌಹಾನ್ ಉಪಸ್ಥಿತರಿದ್ದರು.