ಮಂಗಳೂರು, ಏ.27 (DaijiworldNews/MB) : ನಗರದ ಪಂಪ್ ವೆಲ್ ಮೇಲ್ಸೆತುವೆಯ ಗೋಡೆಯ ಮೇಲೆ ಅವಹೇಳನಕಾರಿ ಬರಹವೊಂದು ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ.
ಕರ್ನಾಟಕ ಬ್ಯಾಂಕ್ ಹೆಡ್ ಆಫೀಸ್ ಮುಂಭಾಗದಲ್ಲಿರುವ ಪಂಪವೆಲ್ ಫ್ಲೈ ಓವರ್ ಗೋಡೆ ಮೇಲೆ ಅವಹೇಳನಕಾರಿ ಪದ ಹಾಗೂ ಲಾಕ್ ಡೌನ್ ಬೇಕಾಗಿದೆ ಎನ್ನುವ ಬರಹವನ್ನು ಕೆಂಪು ಬಣ್ಣದಲ್ಲಿ ದೊಡ್ಡದಾಗಿ ಬರೆದಿರುವುದು ಏ.20ರ ಮಂಗಳವಾರ ಮುಂಜಾನೆ ಪತ್ತೆಯಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ಸಿಸಿಟಿವಿ ಆಧರಿಸಿ ಇಬ್ಬರು ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಇಬ್ಬರು ಕೂಡಾ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಲಾಕ್ಡೌನ್ ಆದರೆ ತಮ್ಮ ಪರೀಕ್ಷೆ ಮುಂದೂಡಿಕೆ ಆಗುತ್ತದೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.