ಕಾಸರಗೋಡು, ಏ.27 (DaijiworldNews/HR): ವಿಧಾನಸಭಾ ಚುನಾವಣೆಯ ಮತ ಎಣಿಕೆ ಕರ್ತವ್ಯಕ್ಕೆ ನೇಮಕಗೊಂಡಿರುವ ಎರಡು ಡೋಸ್ ವಾಕ್ಸಿನೇಷನ್ ಪಡೆಯದೇ ಇರುವ ಸಿಬ್ಬಂದಿ ಮತ್ತು ಏಜೆಂಟರು ಕರ್ತವ್ಯ ನಿರ್ವಹಣೆಯ ಹಿನ್ನೆಲೆಯ 72 ತಾಸುಗಳ ಮುನ್ನ ಆರ್ಟಿಪಿಸಿಆರ್ ತಪಾಸಣೆಗೆ ಒಳಗಾಗಬೇಕು ಎಂದು ಆದೇಶ ಪ್ರಕಟಗೊಂಡಿದೆ.
ಸಾಂಧರ್ಭಿಕ ಚಿತ್ರ
ಈ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ 5 ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಎ. 29ರಂದು ಆರ್ಟಿಪಿಸಿಆರ್ ತಪಾಸಣೆ ನಡೆಯಲಿದೆ.
ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಎ. 29ರಂದು ಬೆಳಗ್ಗೆ 10 ಗಂಟೆಗೆ ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿ, ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಅಂದು ಮಧ್ಯಾಹ್ನ 2 ಗಂಟೆಗೆ ಜನರಲ್ ಆಸ್ಪತ್ರೆಯಲ್ಲಿ, ಕಾಞಂಗಾಡು ವಿಧಾನಸಭಾ ಕ್ಷೇತ್ರದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಮುನಿಸಿಪಲ್ ಟೌನ್ ಹಾಲ್, ತ್ರಿಕರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ನೀಲೇಶ್ವರ ವ್ಯಾಪಾರ ಭವನದಲ್ಲಿ ಆರ್ಟಿಪಿಸಿಆರ್ ತಪಾಸಣೆ ನಡೆಯಲಿದೆ.