ಮಂಗಳೂರು, ಏ. 27 (DaijiworldNews/SM): ಇಂದು ರಾತ್ರಿ 9 ಗಂಟೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೆ ಬರುತ್ತಿದೆ. ಲಾಕ್ ಡೌನ್ ಆದೇಶವನ್ನು ದ.ಕ. ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ನಡೆಸಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಂಗಳವಾರದಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸರಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಮಂಗಳವಾರ ರಾತ್ರಿ 9ರಿಂದ ಮೇ 12ರ ತನಕ ಲಾಕ್ ಡೌನ್ ಆದೇಶ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಬಹುತೇಕ ಎಲ್ಲಾ ಚಟುವಟಿಕೆಗಳು ಸ್ತಬ್ಧವಾಗಿರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಲಾಕ್ ಡೌನ್ ಸಂದರ್ಭ ಏನೆಲ್ಲಾ ಸ್ತಬ್ಧ?
ಶಾಲಾ ಕಾಲೇಜುಗಳನ್ನು ಮೇ 12ರ ತನಕ ತೆರೆಯುವಂತಿಲ್ಲ
ಹೋಟೆಲ್ ಗಳು ತೆರೆಯುವಂತಿಲ್ಲ
ಕೇವಲ ಆನ್ ಲೈನ್ ಗಾಗಿ ಅಡುಗೆ ಕೋಣೆ ತೆರೆಯಬಹುದು
ಲಾಕ್ ಡೌನ್ ಸಂದರ್ಭ ಇತಿಮಿತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಅವಕಾಶ
ಮದುವೆ ಸಮಾರಂಭಕ್ಕೆ 50 ಜನ, ಅಂತ್ಯ ಸಂಸ್ಕಾರಕ್ಕೆ ಕೇವಲ 5 ಜನ
ಸಲೂನ್, ಬ್ಯೂಟಿಪಾರ್ಲರ್ ಗಳಿಗೆ ಈ ಬಾರಿ ಅವಕಾಶವಿಲ್ಲ
ಆಸ್ಪತ್ರೆಗಳು, ಮೆಡಿಕಲ್ ಗಳು, ತುರ್ತು ಸೇವೆಗಳಿಗೆ ಅವಕಾಶ
ಅನಗತ್ಯ ಸಂಚಾರಕ್ಕೆ ಯಾವುದೇ ಅವಕಾಶವಿಲ್ಲ
ಬೆ.6-10ರ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
ಜನ ಮನೆಯಲ್ಲೇ ಇರುವಂತೆ ಮಾಡಲು ಹೋಂ ಡೆಲಿವರಿ ವ್ಯವಸ್ಥೆ
ಹೋಂ ಡೆಲಿವೆರಿ ಬಗ್ಗೆ ಮನಪಾ ಅಧಿಕಾರಿಗಳೊಂದಿಗೆ ಚರ್ಚೆ
ಈ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ಮಾಹಿತಿ ನೀಡಲಾಗುವುದು
ಎರ್ಮಜೆನ್ಸಿ ಅಂತರ್ರಾಜ್ಯ ಪ್ರಯಾಣಕ್ಕೆ ಅವಕಾಶ ಇದೆ
ಆಸ್ಪತ್ರೆ, ಚಿಕಿತ್ಸೆ ಇನ್ನಿತರ ಅವಶ್ಯಕತೆಗಳಿಗಾಗಿ ಪ್ರಯಾಣಿಸಬಹುದು
ಇನ್ನುಳಿದಂತೆ ಇತರೆ ಸಂಚಾರಕ್ಕೆ ಅವಕಾಶ ಇಲ್ಲ
ಗೂಡ್ಸ್ ವಾಹನಗಳಿಗೆ ಅವಕಾಶ ಇದೆ
ಪ್ರತೀ ಬಾರ್ಡರ್ಗಳಲ್ಲಿ ಚೆಕ್ಪೋಸ್ಟ್ ನಿರ್ಮಾಣ
ಅಗತ್ಯ ಕಾರಣಗಳಿಗಾಗಿ ಸಂಚರಿಸುವವರಿಗೆ ಮಾತ್ರ ಅವಕಾಶ