ಉಡುಪಿ, ಎ.28 (DaijiworldNews/PY): "ಜನತಾ ಕರ್ಫ್ಯೂ ಜಾರಿಯಲ್ಲಿರುವುದರಿಂದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಎಲ್ಲಾ ಹೊರರೋಗಿ ಸೇವೆಗಳು ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 2.00 ರವರೆಗೆ ಮಾತ್ರ ಕಾರ್ಯನಿರ್ವಹಿಸಲಿದೆ" ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
"ಕರ್ನಾಟಕ ಸರಕಾರದ ಆದೇಶದಂತೆ ರಾಜ್ಯಾದ್ಯಂತ ಲಾಕ್ ಡೌನ್ ಮಾದರಿಯಲ್ಲಿ ಜನತಾ ಕರ್ಫ್ಯೂ ಜಾರಿಯಲ್ಲಿರುವುದರಿಂದ ಹಾಗೂ ಸಾರ್ವಜನಿಕ ಸಾರಿಗೆಯ ಲಭ್ಯತೆಯ ಕೊರತೆಯ ಕಾರಣ , ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಎಪ್ರಿಲ್ 29ರ ಗುರುವಾರದಿಂದ ಜಾರಿಗೆ ಬರುವಂತೆ, ಎಲ್ಲಾ ಹೊರರೋಗಿ ಸೇವೆಗಳು ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 2.00 ರವರೆಗೆ ಅರ್ಧ ದಿನ ಮಾತ್ರ ಕಾರ್ಯನಿರ್ವಹಿಸಲಿವೆ. ಈ ಬದಲಾವಣೆಯು, ಸರ್ಕಾರದ ಜನತಾ ಕರ್ಫ್ಯೂ ಆದೇಶ ಇರುವವರೆಗೆ ಮುಂದುವರಿಯುತ್ತದೆ. ತುರ್ತು ಸೇವೆಗಳು ಎಂದಿನಂತೆ ಎಲ್ಲಾ ದಿನಗಳಲ್ಲಿ 24 ಗಂಟೆಯೂ ಲಭ್ಯವಿರುತ್ತವೆ" ಎಂದು ಮಾಹಿತಿ ನೀಡಿದ್ದಾರೆ.