ಮಂಗಳೂರು, ಏ.29 (DaijiworldNews/MB) : ಪತಿ ಮೃತಪಟ್ಟ ಎರಡು ಗಂಟೆಯಲ್ಲೇ ಪತ್ನಿಯೂ ಕೂಡಾ ಸಾವನ್ನಪ್ಪಿದ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಇಲ್ಲಿನ ನಿವಾಸಿ, ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಮೃತಪಟ್ಟ ದಂಪತಿಗಳು.
ನ್ಯುಮೋನಿಯಾದಿಂದ ಬಳಲುತ್ತಿದ್ದ ನಝೀರ್ ಅಹ್ಮದ್ರಿಗೆ ಬುಧವಾರ ತೀವ್ರ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡ ಕಾರಣ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿದ್ದು ಸುಮಾರು 12:30 ಗಂಟೆಗೆ ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದರು. ಬಳಿಕ ಮೃತದೇಹವನ್ನು ಮನೆಗೆ ತರಲಾಗಿದ್ದು ಪತಿಯ ಮೃತದೇಹ ನೋಡಿ ಪತ್ನಿ ಜಮೀಳಾ ರಾತ್ರಿ 2:30 ಕ್ಕೆ ಕೊನೆಯುಸಿರೆಳೆದಿದ್ದಾರೆ.
ಮೃತರ ದಫನ ಕಾರ್ಯವು ಗುರುವಾರ ಉಳ್ಳಾಲ ದರ್ಗಾ ವಠಾರದ ಮಯ್ಯತ್ ಗಾರ್ನಲ್ಲಿ ನೆರವೇರಿದೆ.