ಬೆಳ್ತಂಗಡಿ, ಏ 30(DaijiworldNews/MS): ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಸುದರ್ಶನ್ ಅಲಿಯಾಸ್ ಹರ್ಷ ರಾಣೆ (36) ಅವರನ್ನು ಉತ್ತರ ಕನ್ನಡ ಜಿಲ್ಲೆಯ ಸಿರಶಿ ಬಳಿಯ ಮುಂಡಗೋಡದ ಬಡ್ಡಿಗೇರಿಯಲ್ಲಿ ಹತ್ಯೆ ಮಾಡಿದ್ದಾರೆ.
ಏಪ್ರಿಲ್ 29 ರ ಗುರುವಾರ ಸಂಜೆ, ಬಡ್ಡಿಗೇರಿಯಲ್ಲಿ ಬೈಕ್ ನಲ್ಲಿ ಸುದರ್ಶನ್ ಹೋಗುತ್ತಿದ್ದಾಗ, ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.ಮಂಗಳೂರು, ಶಿರಸಿ ಮುಂತಾದೆಡೆ ವ್ಯವಹಾರ ಹೊಂದಿದ್ದ ಸುದರ್ಶನ್ ತಮ್ಮ ಕುಟುಂಬದೊಂದಿಗೆ ಧಾರವಾಡದಲ್ಲಿ ಮೂರು ವರ್ಷಗಳ ಕಾಲ ವಾಸವಾಗಿದ್ದರು. ವಿವಾಹಿತರಾಗಿರುವ ಇವರಿಗೆ ಒಂದು ವರ್ಷ ಮಗುವಿದೆ. ಹಿಂದೂ ಸಂಘಟನೆಗಳಲ್ಲೂ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಕೊಲೆಗೆ ಕಾರಣ ತಿಳಿದುಬಂದಿಲ್ಲ, ಘಟನೆಗೆ ಸಂಬಂಧಿಸಿದಂತೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.