ಮಂಗಳೂರು, ಎ.30 (DaijiworldNews/PY): ಎಪ್ರಿಲ್ 29ರ ಗುರುವಾರ ವಿನಾಯಿತಿಯ ಸಂದರ್ಭ ಜನರಿಂದ ತುಂಬಿ ತುಳುಕುತ್ತಿದ್ದ ನಗರದ ಸೆಂಟ್ರಲ್ ಮಾರುಕಟ್ಟೆ ಶುಕ್ರವಾರ ಸ್ತಬ್ಧವಾಗಿದೆ.
ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯಾಪಾರ ನಡೆಸುತ್ತಿದ್ದು, ಈ ಹಿನ್ನೆಲೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಬೈಕಂಪಾಡಿ ಎಪಿಎಂಸಿಯಲ್ಲೇ ರಖಂ ವ್ಯಾಪಾರ ಮಾಡಲು ಸೂಚಿಸಿದ್ದರು. ಹಾಗಾಗಿ ಕೇಂದ್ರ ಮಾರುಕಟ್ಟೆಗೆ ಹೋಗುವ ಎಲ್ಲಾ ರಸ್ತೆಗಳನ್ನು ಬ್ಯಾರಿಕೇಡ್ನಿಂದ ಪೊಲೀಸರು ಬಂದ್ ಮಾಡಿದ್ದರು.
ಕೇಂದ್ರ ಮಾರುಕಟ್ಟೆಯಲ್ಲಿ ವ್ಯಾಪಾರ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದರಿಂದ, ಶುಕ್ರವಾರ ನಗರದ ಟೌನ್ ಹಾಲ್ನ ಎದುರು ವ್ಯಾಪಾರ ನಡೆಸಿದ್ದಾರೆ.
ಎಪ್ರಿಲ್ 29ರ ಗುರುವಾರ ಬೆಳಗ್ಗೆ 10 ಗಂಟೆಯವರೆಗೂ ಮಾರುಕಟ್ಟೆಯಲ್ಲಿ ಸಾಕಷ್ಟು ಜನರು ಇದ್ದರು. ಅಲ್ಲದೇ, ಮಾಸ್ಕ್ ಧರಿಸದೇ ವ್ಯಾಪಾರದಲ್ಲಿ ತೊಡಗಿದ್ದರು.