ಮಂಜೇಶ್ವರ,ಮೇ 4 (DaijiworldNews/MS): ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಸವಾರ ,ಮೃತಪಟ್ಟು ಇನ್ನೋರ್ವ ಗಾಯಗೊಂಡ ಘಟನೆ ಮೇ.4 ರ ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಹೊಸಬೆಟ್ಟು ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಉಪ್ಪಳ ಗೇಟ್ ಸಮೀಪದ ಅಬ್ದುಲ್ ರಶೀದ್ ( 65 ) ಎಂದು ಗುರುತಿಸಲಾಗಿದೆ. ಸಂಬಂಧಿಕ ಮುಹಮ್ಮದ್ ಅನೀಸ್ (24) ಗಾಯಗೊಂಡಿದ್ದು , ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಲಪಾಡಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಕುಂಬಳೆಯತ್ತ ಬರುತ್ತಿದ್ದ ಕಾರಿನ ನಡುವೆ ಅಪಘಾತ ಉಂಟಾಗಿದೆ . ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ರಶೀದ್’ರ ತಲೆಗೆ ಗಂಭೀರ ಗಾಯಗೊಂಡಿದ್ದು , ಸ್ಥಳದಲ್ಲೇ ಮೃತಪಟ್ಟಿದ್ದಾರೆ. . ರಶೀದ್ ಆಟೋ ಚಾಲಕರಾಗಿದ್ದರು. ಮಂಜೇಶ್ವರ ರಾಣಾ ಪೊಲೀಸರು ಮಹಜರು ನಡೆಸಿದ್ದಾರೆ.