ಕಾರ್ಕಳ, ಮೇ.04 (DaijiworldNews/HR): ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಕಳ ರಿಕ್ಷಾ ನಿಲ್ದಾಣದಲ್ಲಿ ರಿಕ್ಷಾ ಚಾಲಕರಿಗೆ ಹಾಗೂ ಮಾಲಕರಿಗೆ ಕೊರೊನಾ ಸಂಕಷ್ಟ ಸಮಯದಲ್ಲಿ ಜೀವರಕ್ಷಕ ಕಿಟ್ ವಿತರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ನೇತೃತ್ವದಲ್ಲಿ ಜರುಗಿತು.
ಕೊರೊನಾ ಎರಡನೇ ಅಲೆ ಯಾವ ರೀತಿ ದೇಶ ದಂತ್ಯ ಕಾಲ್ಗಿಚ್ಚಿನಂತೆ ಹರಡುತ್ತದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಇದರ ಪರಿವಿಲ್ಲದೆ ಜನರ ಅಮೂಲ್ಯ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಮಾತನಾಡಿ ದೇಶ ಸಂಕಷ್ಟ ದಿನವನ್ನು ಎದುರಿಸುತ್ತಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರಗಳು ಬಡ ಜನರ ಆಶಾಕಿರಣವಾಗಬೇಕಿತ್ತು. ಎರಡು ಸರ್ಕಾರಗಳಿಗೆ ಜನರ ಅಮೂಲ್ಯ ಮತಗಳು ಮಾತ್ರ ಬೇಕು, ಆದರೆ ಅವರ ಅಮೂಲ್ಯ ಜೀವದ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಸರಕಾರ ತನ್ನ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತದೆ ಎಂದು ಆರೋಪಿಸಿದರು.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸಂತೋಷ್ ರಾವ್ ಸುಬೀತ್ ಎನ್.ಆರ್, ಕಾಂತಿ ಶೆಟ್ಟಿ, ರವಿಶಂಕರ್, ಶೋಭಾ, ಸಂತೋಷ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.