ಉಡುಪಿ, ಮೇ 04 (DaijiworldNews/MB) : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಸಮಸ್ಯೆ ಆಗದಂತೆ ನೂತನ ಆಕ್ಸಿಜನ್ ಘಟಕ ನಿರ್ಮಾಣಕ್ಕೆ ಸಿದ್ಧತೆ ಮಾಡಲಾಗಿದ್ದು, ಈ ಸಂಬಂಧ ಇಂದು ಮೇ 4 ರಂದು ರಂದು ಉಡುಪಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನ ಆಕ್ಸಿಜನ್ ಘಟಕ ನಿರ್ಮಿಸಲು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಸ್ಥಳ ಪರಿಶೀಲನೆ ನಡೆಸಿದರು.
ಅತಿ ಶೀಘ್ರದಲ್ಲಿ ಆಕ್ಸಿಜನ್ ಘಟಕ ನಿರ್ಮಾಣಗೊಂಡು ಕಾರ್ಯಾಚರಿಸಲಿದೆ. ಈ ಘಟಕ ದಿನಕ್ಕೆ 100 ಸಿಲಿಂಡರ್ ತುಂಬಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.
ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಆರೋಗ್ಯ ಅಧಿಕಾರಿ ಸುಧೀರ್ ಚಂದ್ರ ಸೂಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಧುಸೂದನ್ ನಾಯಕ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕೋವಿಡ್ ನೋಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಉಪಸ್ಥಿತರಿದ್ದರು.