ಕಾಸರಗೋಡು, ಮೇ.04 (DaijiworldNews/HR): ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಬಡಿದು ಕಾರ್ಮಿಕರೋರ್ವ ಮೃತಪಟ್ಟ ಘಟನೆ ಅಡೂರು ಸಮೀಪ ನಡೆದಿದೆ.
ಮೃತಪಟ್ಟವರನ್ನು ಅಡೂರು ಪಾಂಡಿಯ ಸುಜಿತ್ (26) ಎಂದು ಗುರುತಿಸಲಾಗಿದೆ.
ಪಳ್ಳಂಜಿ ಶಂಕ್ರಪಾಡಿಯಲ್ಲಿ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಕೆಲಸ ನಿರ್ವಹಿಸುತ್ತಿದ್ದಾಗ ಯಂತ್ರವು ಸುಜಿತ್ಗೆ ಬಡಿದಿದ್ದು, ಗಂಭೀರ ಗಾಯಗೊಂಡ ಸುಜಿತ್ ರವರನ್ನು ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬೇಡಡ್ಕ ಠಾಣಾ ಪೊಲೀಸರು ಮಹಜರು ನಡೆಸಿದ್ದಾರೆ.