ಮಂಗಳೂರು, ಮೇ. 06 (DaijiworldNews/HR): ಕೊರೊನಾ ಹರಡುವುದನ್ನು ತಡೆಗಟ್ಟಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕೊರೊನಾ ಸಹಾಯವಾಣಿ ವತಿಯಿಂದ 'ಬ್ರೇಕ್ ದಿ ಚೈನ್' ಜಾಗೃತಿ ಅಭಿಯಾನ ಗುರುವಾರ ನಡೆಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರ ಐವನ್ ಡಿಸೋಜಾ ಮಲ್ಲಿಕಟ್ಟೆ ಮಾರುಕಟ್ಟೆಯ ಬಳಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ್ದು, ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ಗಳ ಬಳಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಅಭಿಯಾನದಲ್ಲಿ ತಿಳಿಸಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದರು.
ಈ ವೇಳೆ ಕಾರ್ಪೋರೇಟರ್ ಶಶಿಧರ್ ಹೆಗ್ಡೆ ಮತ್ತು ಇತರರು ಉಪಸ್ಥಿತರಿದ್ದರು.