ಮಂಗಳೂರು, ಮೇ 06 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮೇ 7ರ ಶುಕ್ರವಾರದಿಂದ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ನಿರ್ಧರಿಸಿದ್ದು, ಇದರ ಆರಂಭಿಕ ಹಂತ ಎಂಬತೆ ಮಂಗಳೂರು ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರ ನೇತೃತ್ವದ ತಂಡ ನೈಟ್ ಕಾರ್ಯಾಚರಣೆ ನಡೆಸಿದೆ.
ಮಂಗಳೂರು ನಗರದ ವಿವಿಧೆಡೆಗಳಲ್ಲಿ ಪ್ರಮುಖ ರಸ್ತೆಗಳಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿ ಕಮಿಷನರ್ ತಪಾಸಣೆಗೆ ಮುಂದಾದರು. ಈ ಸಂದರ್ಭದಲ್ಲಿ ಅನೇಕ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸಿ ಸಂಚಾರ ನಡೆಸುತ್ತಿರುವುದು ಪತ್ತೆಯಾಗಿದ್ದು, ಅವರ ವಿರುದ್ಧ ಕಮಿಷನರ್ ಕ್ರಮ ಕೈಗೊಂಡಿದ್ದಾರೆ.
ಕೆಲವು ವಾಹನ ಸವಾರರು ಸೂಕ್ತ ದಾಖಲೆಗಳನ್ನು ನೀಡಿದ್ದಾರೆ. ಆದರೆ, ಹಲವು ಮಂದಿ ಸೂಕ್ತ ದಾಖಲೆಗಳನ್ನು ನೀಡಲು ವಿಫಲರಾದರು. ಅಂತವರ ವಿರುದ್ಧ ಪ್ರಕರಣ ದಾಖಲಿಸುವ ಜೊತೆಗೆ ದಂಡ ವಿಧಿಸಲಾಯಿತು.