ಬಂಟ್ವಾಳ, ಮೇ. 08 (DaijiworldNews/HR): ಕೊರೊನಾ ನಿಯಂತ್ರಣ ಕುರಿತು ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಅಧಿಕಾರಿಗಳ ಜೊತೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ.ಸಭಾಂಗಣದಲ್ಲಿ ಸಭೆ ನಡೆಸಿದ್ದಾರೆ.
ಈ ಕುರಿತು ಸಭೆಯಲ್ಲಿ ಮಾತನಾಡಿದ ಅವರು, "ಗ್ರಾಮದಲ್ಲಿ ಕೊರೊನಾ ಸೋಂಕಿನಿಂದ ಯಾರು ಸಾಯದಂತೆ ಮುಂಜಾಗ್ರತಾ ಕ್ರಮವನ್ನು ಅನುಸರಿಸಿ, ಇದು ಮೊದಲ ಆದ್ಯತೆ ಯಾಗಬೇಕು" ಎಂದರು.
ಇನ್ನು "ಕೊರೊನಾ ಸೊಂಕಿತರ ಮನೆಗೆ ಬೇಕಾದ ರೇಷನ್ ಹಾಗೂ ಮೆಡಿಸಿನ್ ನೀಡುವ ಕೆಲಸ ತಾಲೂಕು ಕಾರ್ಯನಿರ್ವಹಣಾ ಅಧಿಕಾರಿಯ ಕಡೆಯಿಂದ ಕಡ್ಡಾಯವಾಗಿ ಆಗಬೇಕಾಗಿದೆ" ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಎ.ಸಿ.ಮದನ್ ಮೋಹನ್ ಮಾತನಾಡಿ, "ಕೊರೊನಾ ನಿಯಂತ್ರಣಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಸಮಿತಿಯವರು ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಕೆಲಸ ಮಾಡಿದರೆ ನಿಯಂತ್ರಣ ಸಾಧ್ಯ. ದ.ಕ.ಜಿಲ್ಲೆಯಲ್ಲಿ 1077 ಗೆ ಕರೆ ಮಾಡಿದರೆ 24*7 ಯಾವುದೇ ಕ್ಷಣದಲ್ಲಿ ಎಲ್ಲಾ ರೀತಿಯ ಸಹಾಯ ಮಾಡುತ್ತಾರೆ" ಎಂದು ಅವರು ಸ್ಪಷ್ಟವಾಗಿ ತಿಳಿಸಿದರು.
ವೇದಿಕೆಯಲ್ಲಿ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ತಹಶೀಲ್ದಾರ್ ರಶ್ಮಿಎಸ್. ಆರ್ , ತಾ.ಪಂ.ಇಒ.ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾಪ್ರಭು ಉಪಸ್ಥಿತರಿದ್ದರು.
ಪುದು ಗ್ರಾ.ಪಂ.ಅಧ್ಯಕ್ಷ ರಾದ ರಮ್ಲಾನ್ ಮಾರಿಪಳ್ಳ, ಜಿ.ಪಂ.ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಮಮತಾ ಗಟ್ಟಿ, ಮಾಜಿ ಜಿ.ಪಂ.ಸದಸ್ಯ ಉಮ್ಮರ್ ಫಾರೂಕ್ ಪರಂಗಿಪೇಟೆ ಸಭೆಯಲ್ಲಿ ಭಾಗವಹಿಸಿದ್ದರು.