ಕುಂದಾಪುರ, ಮೇ. 08 (DaijiworldNews/HR): ಕೊರೊನಾ ನಿಯಮವಳಿಗಳನ್ನು ಉಲ್ಲಂಘಿಸಿರುವ ಕುರಿತಂತೆ ಹಲವಾರು ಪ್ರಕರಣಗಳು ಎರಡು ದಿನಗಳಲ್ಲಿ ದಾಖಲಾಗಿದ ಘಟನೆ ಉಡುಪಿ, ಕುಂದಾಪುರದಲ್ಲಿ ನಡೆದಿದೆ.
ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವು ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಾವಶ್ಯಕವಾಗಿ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿಕೊಂಡು ನಿರ್ಲಕ್ಷ್ಯತನದಿಂದ ನಿಯಮಗಳನ್ನು ಉಲ್ಲಂಘಿಸಿದ ಹಲವು ಪ್ರಕರಣಗಳು ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ.
ಇನ್ನು ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.7ರಂದು ಹೆಚ್ಚು ಪ್ರಕರಣಗಳು ದಾಖಲಾಗಿದೆ.
ಕುಂದಾಪುರ ಗ್ರಾಮಾಂತರ ಠಾಣೆ, ಗಂಗೊಳ್ಳಿ, ಶಂಕರನಾರಾಯಣ ಠಾಣೆಗಳಲ್ಲಿಯೂ ಸಾಕಷ್ಟು ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.