ಮಂಗಳೂರು, ಮೇ 09 (DaijiworldNews/SM): ಕೊರೋನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಈ ನಡುವೆ ಅನಗತ್ಯ ವಾಹನ ಸಂಚಾರಕ್ಕೆ ಅವಕಾಶವಿಲ್ಲ ಎಂದು ಉಲ್ಲೇಖಿಸಲಾಗಿದೆ. ಈ ನಡುವೆ ಮಂಗಳೂರಿನಲ್ಲಿ ಅಗತ್ಯ ವಸ್ತುಗಳನ್ನು ಪಡೆಯಲು ವಾಹನಗಳ ಮೂಲಕ ಸಂಚರಿಸಬಹುದೆಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಅಗತ್ಯ ವಸ್ತು ಪಡೆಯಲು ವಾಹನ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಕಮೀಷನರ್ ಶಶಿಕುಮಾರ್ ಅವರು ವೀಡಿಯೋ ಮಾಡಿ ರಿಲೀಸ್ ಮಾಡಿದ್ದಾರೆ. ಸಾಧ್ಯವಾದಷ್ಟು ಮನೆಯ ಪಕ್ಕದಲ್ಲೇ ಅಗತ್ಯ ವಸ್ತುಗಳನ್ನು ಖರೀದಿಸಿ. ಅನಿವಾರ್ಯ ಸಂದರ್ಭ ಇದ್ದಲ್ಲಿ ಮಾತ್ರ ವಾಹನ ಉಪಯೋಗಿಸಬಹುದು. ಇನ್ನು ಫುಡ್ ಪಾರ್ಸೆಲ್ ತರಲು ವಾಹನ ಬಳಸುವಂತಿಲ್ಲ ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ.
ಕೈಗಾರಿಕಾ ಸಿಬ್ಬಂದಿಗಳಿಗೆ ಖಾಸಗಿ ವಾಹನ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಾಧ್ಯವಾದಷ್ಟು ಕಂಪನಿ ವಾಹನದಲ್ಲೇ ಪ್ರಯಾಣಿಸಬೇಕು. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಕಂಪನಿ ಐಡಿ ತೋರಿಸಿ ಪ್ರಯಾಣಿಸಬಹುದು ಎಂದು ಕಮಿಷನರ್ ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.