ಮಂಗಳೂರು, ಮೇ. 10 (DaijiworldNews/HR): ಕರ್ನಾಟಕದಾದ್ಯಂತ ಇಂದಿನಿಂದ ಲಾಕ್ಡೌನ್ ಜಾರಿಯಲಿದ್ದು, ಈ ವೇಳೆ ಅನಗತ್ಯ ತಿರುಗಾಟದ ವಾಹನಗಳಿಗೆ ನಗರ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಇಂದು ರಸ್ತೆಗಿಳಿದಿದ್ದು, ಅನಗತ್ಯ ತಿರುಗಾಟದ ವಾಹನಗಳನ್ನು ವಶಪಡಿಸಿಕೊಂಡಿದ್ದು, ಆ ವಾಹನಗಳನ್ನು ನೆಹರು ಮೈದಾನದಲ್ಲಿ ನಿಲ್ಲಿಸಲಾಗಿದೆ.
ಇನ್ನು ಮೇ 9 ರ ರವಿವಾರ 233 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಾಜ್ಯ ಸರ್ಕಾರ ಲಾಕ್ಡೌನ್ ಹೇರಿದ ಬಳಿಕ ಜನರ ಸಂಚಾರವನ್ನು ತಡೆಯಲು ಪೊಲೀಸರು ನಗರದ ವಿವಿಧ ಕಡೆಗಳಲ್ಲಿ ವಾಹನ ತಪಾಸಣೆಗಳನ್ನು ಬಿಗಿಗೊಳಿಸಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಳ ಬಳಿಕ ನಿಯಮಗಳನ್ನು ಕಠಿಣಗೊಳಿಸಲು ಸರ್ಕಾರ ಮತ್ತು ಜಿಲ್ಲಾಡಳಿತದ ಸೂಚನೆಗಳು ಬಂದಿವೆ.
ಹಲವಾರು ವಾಹನಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ, ಎನ್ಡಿಎಂಎ ಮತ್ತು ಸಾಂಕ್ರಾಮಿಕ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ.
ಮೇ 10 ರಿಂದ ಬೆಳಿಗ್ಗೆಯಿಂದ ಜಿಲ್ಲಾಡಳಿತ ಹೊಸ ಲಾಕ್ಡೌನ್ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಿಗ್ಗೆ 6 ರಿಂದ 9 ರವರೆಗೆ ಮಾತ್ರ ಅಂಗಡಿಗಳನ್ನು ತೆರೆಯಬಹುದಾಗಿದೆ.
ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, "ರಾಜ್ಯ ಸರ್ಕಾರ ಮೇ 10 ರಿಂದ ಮೇ 25 ರವರೆಗೆ ಕಠಿಣ ಮಾರ್ಗಸೂಚಿಗಳನ್ನು ವಿಧಿಸಿದ್ದು, ಬೆಳಿಗ್ಗೆಯಿಂದ ನಮ್ಮ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಕಳೆದ ಎರಡು ದಿನಗಳಲ್ಲಿ ವಾರಾಂತ್ಯದ ಕರ್ಫ್ಯೂ ಕಾರಣ ಜನಸಂದಣಿ ಇಂದು ಹೆಚ್ಚಾಗಿದೆ, ಬಹುಶಃ ನಾಳೆಯಿಂದ ಜನಸಂದಣಿ ಕಡಿಮೆಯಾಗುತ್ತದೆ. ಇದುವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನಲ್ಲಿ 180 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಜನರು ಅನಗತ್ಯವಾಗಿ ಹೊರಹೋಗಬೇಡಿ" ಎಂದು ಮನವಿ ಮಾಡಿಕೊಂಡಿದ್ದಾರೆ.