ಉಡುಪಿ, ಮೇ 11(DaijiworldNews/MS): ಅನಾರೋಗ್ಯ ಹಾಗೂ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿ ಆಟೋ ಚಾಲಕನೋರ್ವ ನೇಣಿಗೆ ಶರಣಾದ ಘಟನೆ 76 ನೇ ಬಡಗಬೆಟ್ಟಿನ ಬೈಲೂರಿನಲ್ಲಿ ನಡೆದಿದೆ.
ಮೃತರನ್ನು ಯತಿರಾಜ್ (42) ಎಂದು ಗುರುತಿಸಲಾಗಿದೆ. ಮದ್ಯವ್ಯಸನಿಯೂ ಆಗಿದ್ದ ಇವರು ಸುಮಾರು ಒಂದು ವರ್ಷದಿಂದ ಲಿವರ್ ಸಂಬಂದಿ ಖಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಚಿಕಿತ್ಸೆ ಪಡೆದರೂ ಗುಣಮುಖನಾಗದೆ ಚಿಂತೆಯಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು. ಇದಲ್ಲದೆ ಕೊರೊನಾ ಕಾರಣದಿಂದ ರಾಜ್ಯದಲ್ಲಿ ಘೋಷಿಸಲಾದ 14 ದಿನದ ಲಾಕ್ ಡೌನ್ ನಿಂದ ಉದ್ಯೋಗವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದರು. ಹೀಗಾಗಿ ಮನನೊಂದು ಮೇ 10ರಂದು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821