ಮಂಗಳೂರು, ಮೇ.11 (DaijiworldNews/HR): ಮನೆಗಳಿಂದ ತ್ಯಾಜ್ಯ ಸಂಗ್ರಹಿಸಲು ಬರುವ ಕಾರ್ಮಿಕರಿಗೆ ಉಪಯೋಗಿಸಿದ ಮಾಸ್ಕ್, ಪಿಪಿಇ ಕಿಟ್ಗಳು ಮತ್ತು ಇತರ ಜೈವಿಕ ನೈರ್ಮಲ್ಯ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಹಸ್ತಾಂತರಿಸುವಂತೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಂಧರ್ಭಿಕ ಚಿತ್ರ
ಕೊರೊನಾ ಸೋಂಕಿನ ಎರಡನೇ ಅಲೆ ವೇಗಗತಿಯಲ್ಲಿ ಹರಡುತ್ತಿದ್ದು, ಅನೇಕರು ತಮ್ಮ ಮನೆಗಳಲ್ಲಿ ಹೋಂ ಕ್ವಾರಂಟೈನ್ ಆಗುತ್ತಿರುವುದರಿಂದ ಅಲ್ಲಿರುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ದೊಡ್ಡ ಜವಾಬ್ದಾರಿಯನ್ನು ಮಹಾನಗರ ಪಾಲಿಕೆ ಹೊಂದಿದ್ದು, ಹಾಗಾಗಿ ಮನೆಗಳಿಂದ ತ್ಯಾಜ್ಯ ಸಂಗ್ರಹಿಸಲು ಬರುವ ಕಾರ್ಮಿಕರ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾಗರಿಕರ ಸಹಕಾರ ಅಗತ್ಯವಾಗಿದ್ದು, ಬಳಸಿದ ಮಾಸ್ಕ್, ಪಿಪಿಇ ಕಿಟ್ಗಳು ಮತ್ತು ಜೈವಿಕ ನೈರ್ಮಲ್ಯ ತ್ಯಾಜ್ಯಗಳನ್ನು ಕಾರ್ಮಿಕರಿಗೆ ಹಸ್ತಾಂತರಿಸುವ ಮೊದಲು ಅದನ್ನು ಬೇರ್ಪಡಿಸುವ ಮೂಲಕ ನಮ್ಮೊಂದಿಗೆ ಕೈಜೋಡಿಸಿ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.