ಬೆಳ್ತಂಗಡಿ, ಮೇ.11 (DaijiworldNews/HR): ಸುದೆಮುಗೆರು ಪರಿಸರದಲ್ಲಿರುವ 78 ಮನೆಗಳಿಗೆ ಸೀಲ್ ಡೌನ್ ನಿರ್ಬಂಧವನ್ನು ಹೇರಳಾಗಿದ್ದು, ಇದೀಗ ರಸ್ತೆಗೆ ಹಾಕಲಾಗಿದ್ದ ತಡೆ ಬೇಲಿಯನ್ನು ತೆರವುಗೊಳಿಸಿದ ತಾಲೂಕು ಆಡಳಿತ ಕೊರೊನಾ ದೃಢಪಟ್ಟ ಆರು ಮನೆಗಳನ್ನು ಮಾತ್ರ ಸೀಲ್ ಡೌನ್ ಮಾಡಿದೆ.
ಸುದೆಮುಗೆರುವಿನಲ್ಲಿರುವ ಆರು ಮನೆಗಳ ಹತ್ತು ಮಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಪಟ್ಟಣ ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಇಲ್ಲಿನ ಮುಖ್ಯ ರಸ್ತೆಗೆ ಬೇಲಿ ಹಾಕಿ 78 ಮನೆಗಳನ್ನೂ ಸೀಲ್ ಡೌನ್ ಮಾಡಿ ಯಾರೂ ಹೊರಬರದಂತೆ
ಇನ್ನು ಈ ಪ್ರದೇಶದಲ್ಲಿ ಕೂಲಿ ಕಾರ್ಮಿಕರೇ ಹೆಚ್ವಾಗಿರುವುದರಿಂದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರು ಹಾಗೂ ಸಿಪಿಐಎಂ ಮುಖಂಡರುಗಳು ಸೋಮವಾರ ಅಲ್ಲಿನ ಮನೆಯವರಿಗೆ ಅಗತ್ಯ ಸಾಮಗ್ರಿಗಳ ಕಿಟ್ ನೀಡಲು ಹೋದ ವೇಳೆ ಜನರು ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದು, ಬಂಗೇರ ಅವರು ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತಿನ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡು ತಕ್ಷಣ ಅನಗತ್ಯವಾಗಿ ಹಾಕಲಾಗಿರುವ ಬೇಲಿಗಳನ್ಬು ತೆರವು ಮಾಡುವಂತೆ ಸೂಚಿಸಿದ್ದಾರೆ.
ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಕೂಡಲೇ ರಸ್ತೆಗೆ ಅಡ್ಡಲಾಗಿ ಹಾಕಿದ್ದ ತಡೆಬೇಲಿಯನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.