ಸುರತ್ಕಲ್, ಮೇ.12 (DaijiworldNews/PY): ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕುಳಾಯಿ ಆರೋಗ್ಯ ಕೇಂದ್ರಕ್ಕೆ ಶಾಸಕ ಡಾ.ವೈ. ಭರತ್ ಶೆಟ್ಟಿ ಭೇಟಿ ನೀಡಿದ್ದು, ನಾಗರಿಕರಿಗೆ ಲಸಿಕಾ ಕೇಂದ್ರದ ವ್ಯವಸ್ಥೆ, ಕೊರೊನಾ ರೋಗಿಗಳ ಚಿಕಿತ್ಸೆಯ ಸೌಲಭ್ಯಗಳನ್ನು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, "ವೈದ್ಯರಿಗೆ ನೆರವಾಗಲು ನೋಡಲ್ ಅಧಿಕಾರಿಗಳು ಹಾಗೂ ಟಾಸ್ಕ್ ಫೋರ್ಸ್ ಇದ್ದು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಕಾರ್ಪೊರೇಟರ್ ಅಧ್ಯಕ್ಷತೆಯಲ್ಲಿ ಸೋಂಕಿತರ ನಿಗಾಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದಲ್ಲಿ ಸಸ್ಪೆಂಡ್ಗೆ ಕ್ರಮ ಕೈಗೊಳ್ಳಬೇಕಾಗುತ್ತದೆ" ಎಂದು ಎಚ್ಚರಿಸಿದ್ದಾರೆ.
ಈ ವೇಳೆ ಶಾಸಕರೊಂದಿಗೆ, ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್, ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೊರೇಟರ್ಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.