ಉಡುಪಿ, ಮೇ.12 (DaijiworldNews/PY): ಜಿಲ್ಲೆಯಲ್ಲಿ ಕೊರೊನಾ ಸೋಂಕು ಬಾಧಿತ ವ್ಯಕ್ತಿಗಳಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ನ ಅವಶ್ಯಕತೆ ಇಲ್ಲದೇ ಹೋಂ ಐಸೋಲೇಷನ್ ಆಗಬೇಕಾದವರಿಗೆ, ಮನೆಯಲ್ಲಿ ಹೋಂ ಐಸೋಲೇಷನ್ಗೆ ಸಮಸ್ಯೆ ಇದ್ದಲ್ಲಿ ಅವರಿಗೆ ತಾಲೂಕು ಕೇಂದ್ರದಲ್ಲಿ ಕೊರೊನಾ ಕೇರ್ ಸೆಂಟರ್ ಅನ್ನು ತೆರೆಯಲಾಗಿದೆ.
ಕೊರೊನಾ ಸೋಂಕು ಬಾಧಿತ ವ್ಯಕ್ತಿಗಳಿಗೆ ಈ ಕೊರೊನ ಕೇರ್ ಸೆಂಟರ್ನಲ್ಲಿಅವಶ್ಯ ಸೌಲಭ್ಯಗಳಾದ ಬೆಡ್ ವ್ಯವಸ್ಥೆ, ಊಟದ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ಹಾಗೂ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವ ಸಲುವಾಗಿ ಅಧಿಕಾರಿಗಳನ್ನು ಕೊರೊನಾ ಕೇರ್ ಸೆಂಟರ್ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹಾಗೂ ಜಿಲ್ಲಾದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕುಂದಾಪುರ ತಾಲೂಕಿನ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕೊರೊನಾ ಕೇರ್ ಸೆಂಟರ್ಗೆ ನೋಡೆಲ್ ಅಧಿಕಾರಿಯಾಗಿ ಕುಂದಾಪುರ ಭೂದಾಖಲೆಗಳ ಸಹಾಯಕ ನಿರ್ದೇಶಕ ಜಗದೀಶ್ಮೋ:9902197826, ಕಾರ್ಕಳ ತಾಲೂಕಿನ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ನಿಲಯ ಮಿಯಾರು, ಕಾರ್ಕಳ ಕೊರೊನಾ ಕೇರ್ ಸೆಂಟರ್ಗೆ ನೋಡೆಲ್ ಅಧಿಕಾರಿಯಾಗಿ ಕಾರ್ಕಳ ಅಕ್ಷರ ದಾಸೋಹ ಶಿಕ್ಷಣ ಇಲಾಖೆಯ ಸಹಾಯಕ ನಿದೇರ್ಶಕ ಭಾಸ್ಕರ ಟಿ ಮೋ: 9449494011, ಹೆಬ್ರಿ ತಾಲೂಕು ಆರೋಗ್ಯ ಸಮುದಾಯ ಭವನ, ತಾಲೂಕು ಆಸ್ಪತ್ರೆ ಕೊರೊನಾ ಸೆಂಟರ್ಗೆ ನೋಡೆಲ್ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳದ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಶೆಟ್ಟಿ ಪ್ರವೀಣ್ ಮೊ: 9448847958, ಉಡುಪಿ ತಾಲೂಕಿನ ಎಂ.ಐ.ಟಿ ಹಾಸ್ಟೆಲ್ ಮಣಿಪಾಲ ಕೊರೊನಾ ಕೇರ್ ಸೆಂಟರ್ಗೆ ನೋಡೆಲ್ ಅಧಿಕಾರಿಯಾಗಿ ಭೂದಾಖಲೆಗಳ ಸಹಾಯಕ ನಿದೇರ್ಶಕ ತಿಪ್ಪೇರಾಯ ಕರೆಪ್ಪ ತೊರವಿ ಮೊ: 8277040047 ನೋಡೆಲ್ ಅಧಿಕಾರಿಗಳನ್ನುನೇಮಕ ಮಾಡಲಾಗಿದೆ.
"ನೋಡೆಲ್ ಅಧಿಕಾರಿಗಳಿಗೆ ತಮಗೆ ನೀಡಲಾದ ನಿದೇರ್ಶನವನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಯಾವುದೇ ತರವಾದ ಲೋಪಕ್ಕೆ ಅವಕಾಶವಿಲ್ಲದಂತೆ ಕರ್ತವ್ಯ ನಿರ್ವಹಿಸುವುದು ತಪ್ಪಿದ್ದಲ್ಲಿಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.