ಮಂಗಳೂರು, ಮೇ 12 (DaijiworldNews/SM): ಜಿಲ್ಲೆಯಲ್ಲಿ ಬೀಡಿ ಕಟ್ಟುವವರಿಗೆ ಅವಕಾಶ ಕಲ್ಪಿಸಲು ಆದೇಶ ನೀಡಲಾಗಿದೆ. ಈ ಬಗ್ಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ದೈಜಿವರ್ಲ್ಡ್ ವಾಹಿನಿ ಮೂಲಕ ಮಾಹಿತಿ ನೀಡಿದ್ದಾರೆ.
ಬೀಡಿ ಕಾರ್ಮಿಕರು ಮನೆಯಲ್ಲಿಯೇ ಇದ್ದುಕೊಂಡು ಉದ್ಯೋಗ ನಡೆಸುತ್ತಿದ್ದಾರೆ. ಜೀವನೋಪಾಯಕ್ಕಾಗಿ ಬೀಡಿಯನ್ನು ನಂಬಿ ಬದುಕುವವರೂ ಅನೇಕ ಮಂದಿ ಇದ್ದಾರೆ. ಈ ಕಾರಣಕ್ಕಾಗಿ ಆದೇಶ ಹೊರಡಿಸಲಾಗಿದೆ. ಬೀಡಿ ಸಾಗಾಟದ ವಾಹನಕ್ಕೂ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.
ಇನ್ನು ಈ ಹಿಂದೆ ತಮ್ಮ ಸಂಕಷ್ಟದ ಬಗೆ ಬೀಡಿ ಕಾರ್ಮಿಕರು ದೈಜಿವರ್ಲ್ಡ್ ವಾಹಿನಿಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದರು. ಅಲ್ಲದೆ, ತಾವು ಮನೆಯಲ್ಲೇ ಇದ್ದು ನಮ್ಮ ಹೊಟ್ಟೆ ಪಾಡಿಗಾಗಿ ದುಡಿಯುತ್ತಿದ್ದು, ನಮಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಬೀಡಿ ಉದ್ಯಮ ಸಂಪೂರ್ಣ ಬಂದ್ ಆಗಿತ್ತು. ಈ ನಡುವೆ ಕಾರ್ಮಿಕರ ಅಳಲು ಆಳಿಸಿದ್ದ ದೈಜಿವಲ್ಡ್ ಈ ಬಗ್ಗೆ ಸುದ್ದಿ ಬಿತ್ತರಿಸಿ ಜನಪ್ರತಿನಿಧಿಗಳ ಗಮನಕ್ಕೆ ತರುವ ಪ್ರಯತ್ನ ನಡೆಸಿತ್ತು. ಶಾಸಕ ರಾಜೇಶ್ ನಾಯ್ಕ್ ಸಂಪರ್ಕಿಸಿ ಸಮಸ್ಯೆಯ ಬಗ್ಗೆ ಅರಿವು ಮೂಡಿಸಲಾಗಿತ್ತು. ಆ ಸಂದರ್ಭದಲ್ಲಿ ಸಮಸ್ಯೆ ಬಗೆಹರಿಸಿಕೊಡುವ ಭರವಸೆಯನ್ನು ಶಾಸಕ ರಾಜೇಶ್ ನಾಯ್ಕ್ ನೀಡಿದ್ದರು.
ಶಾಸಕ ರಾಜೇಶ್ ನಾಯ್ಕ್ ಅವರು ಈ ವಿಚಾರವನ್ನು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯವರ ಗಮನಕ್ಕೆ ತಂದಿದ್ದರು. ಇಡೀಘ ಬೀಡಿ ಕಟ್ಟುವವರಿಗೆ ಅವಕಾಶ ನೀಡಿ ಕೋಟಾ ಶ್ರೀನಿವಾಸ್ ಪೂಜಾರಿ ಆದೇಶ ನೀಡಿದ್ದು, ಬೀಡಿ ಕಾರ್ಮಿಕರ ಮೊಗದಲ್ಲಿ ಮಂದಹಾಸ ಮೂಡಿದ್ದಾರೆ.